Homeಮುಖಪುಟಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

- Advertisement -
- Advertisement -

ರುದ್ರಪ್ರಯಾಗ (ಉತ್ತರಖಂಡ): ಇಂದು (ಭಾನುವಾರ) ಮುಂಜಾನೆ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಪತನಗೊಂಡು, ಅದರಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ.

ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಈ ಅಪಘಾತವು ಗೌರಿಕುಂಡ್ ಅರಣ್ಯದ ಮೇಲೆ ಸಂಭವಿಸಿದೆ. ಐವರು ಯಾತ್ರಿಕರು, ಪೈಲಟ್ ಮತ್ತು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಉದ್ಯೋಗಿ ಸಾವನ್ನಪ್ಪಿದ್ದಾರೆ ಎಂದು ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಬೆಳಿಗ್ಗೆ 5:30 ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟು ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಅಪಘಾತದ ಸ್ಥಳವು ಗೌರಿ ಮಾಯ್ ಖಾರ್ಕ್ ಎಂದು ಕರೆಯಲ್ಪಡುವ ಗೌರಿಕುಂಡ್‌ನಿಂದ ಸುಮಾರು 5 ಕಿ.ಮೀ ದೂರದಲ್ಲಿದೆ. ಆರ್ಯನ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹೆಲಿಕಾಪ್ಟರ್ ಕೇದಾರಘಾಟಿಯ ಗೌರಿಕುಂಡ್ ಮತ್ತು ತ್ರಿಜುಗಿನಾರಾಯಣ್ ನಡುವೆ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಕೆಟ್ಟ ಹವಾಮಾನದಿಂದಾಗಿ ಗೋಚರತೆ ಇಲ್ಲದಿರುವುದು ಅಪಘಾತಕ್ಕೆ ಕಾರಣ ಮತ್ತು ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಾಜ್ವರ್ ಹೇಳಿದ್ದಾರೆ.

ಹೆಲಿಕಾಪ್ಟರ್ ನಾಪತ್ತೆಯಾಗಿರುವ ಬಗ್ಗೆ ಇಂದು ಬೆಳಿಗ್ಗೆ ಮಾಹಿತಿ ಬಂದಿದ್ದು, ತಕ್ಷಣವೇ ಹುಡುಕಾಟ ಆರಂಭಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧಿಕಾರಿ ಮತ್ತು ಹೆಲಿ ಸೇವೆಯ ನೋಡಲ್ ಅಧಿಕಾರಿ ರಾಹುಲ್ ಚೌಬೆ ತಿಳಿಸಿದ್ದಾರೆ.

ಮೃತರು ಮಹಾರಾಷ್ಟ್ರ, ಗುಜರಾತ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶದವರು. ಹೆಲಿಕಾಪ್ಟರ್‌ನಲ್ಲಿದ್ದವರಲ್ಲಿ ಮಹಾರಾಷ್ಟ್ರದ ಶ್ರದ್ಧಾ ರಾಜ್‌ಕುಮಾರ್ ಜೈಸ್ವಾಲ್ (35), ಮಹಾರಾಷ್ಟ್ರದ ಕಾಶಿ (2), ಗುಜರಾತ್‌ನ ರಾಜ್‌ಕುಮಾರ್ ಸುರೇಶ್ ಜೈಸ್ವಾಲ್ (41), ಉತ್ತರಾಖಂಡದ ವಿಕ್ರಮ್ ಸಿಂಗ್ ರಾವತ್, ಉತ್ತರ ಪ್ರದೇಶದ ವಿನೋದ್ ದೇವಿ (66), ಉತ್ತರ ಪ್ರದೇಶದ ತುಷ್ಟಿ ಸಿಂಗ್ (19) ಮತ್ತು ಪೈಲಟ್ ಕ್ಯಾಪ್ಟನ್ ರಾಜ್‌ವೀರ್ ಸಿಂಗ್ ಚೌಹಾಣ್ ಸೇರಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಇತರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.

ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಅಹಮದ್‌ಬಾದ್‌ನಲ್ಲಿ ಪತನಗೊಂಡು ವಿಮಾನದಲ್ಲಿದ್ದ 241 ಜನರು ಮತ್ತು ಅದು ಅಪಘಾತಗೊಂಡ ಸ್ಥಳದಲ್ಲಿದ್ದ ಹಲವಾರು ಜನರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು, ಮೇ 8ರಂದು, ಗಂಗೋತ್ರಿ ಧಾಮ್‌ಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯಲ್ಲಿ ಪತನಗೊಂಡು ಆರು ಜನರು ಸಾವನ್ನಪ್ಪಿದರು.

ಜೂನ್ 7ರಂದು ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷದಿಂದಾಗಿ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಇದರಲ್ಲಿ ಪೈಲಟ್ ಗಾಯಗೊಂಡಿದ್ದರು. ಆದರೆ ಅದರಲ್ಲಿದ್ದ ಐವರು ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಇತ್ತೀಚಿನ ಅಪಘಾತದ ನಂತರ, ಧಾಮಿ ರಾಜ್ಯದಲ್ಲಿ ಹೆಲಿಕಾಪ್ಟರ್ ಕಾರ್ಯಾಚರಣೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿತ್ತು.

ರಾಜ್ಯದಲ್ಲಿ ಹೆಲಿಕಾಪ್ಟರ್ ಸೇವೆಗಳ ಕಾರ್ಯಾಚರಣೆಗೆ ಕಟ್ಟುನಿಟ್ಟಾದ SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಸಿದ್ಧಪಡಿಸಬೇಕು. ಇದರಲ್ಲಿ ಹೆಲಿಕಾಪ್ಟರ್‌ನ ತಾಂತ್ರಿಕ ಸ್ಥಿತಿಯ ಸಂಪೂರ್ಣ ಪರಿಶೀಲನೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಹೆಲಿಕಾಪ್ಟರ್ ಕಾರ್ಯಾಚರಣೆಗಳ ಮೊದಲು ಹವಾಮಾನ ಸ್ಥಿತಿಯನ್ನು ಸಹ ಪರಿಶೀಲಿಸಬೇಕು. ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸಲು ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ. ಇದು ಹೆಲಿಕಾಪ್ಟರ್ ಕಾರ್ಯಾಚರಣೆಗಳ ಎಲ್ಲಾ ತಾಂತ್ರಿಕ ಮತ್ತು ಸುರಕ್ಷತಾ ಅಂಶಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ SOP ಅನ್ನು ಸಿದ್ಧಪಡಿಸುತ್ತದೆ.

ಹೆಲಿಕಾಪ್ಟರ್ ಸೇವೆಗಳ ಕಾರ್ಯಾಚರಣೆಯು ಸಂಪೂರ್ಣವಾಗಿ ಸುರಕ್ಷಿತ, ಪಾರದರ್ಶಕ ಮತ್ತು ನಿಗದಿತ ಮಾನದಂಡಗಳ ಪ್ರಕಾರವಾಗಿದೆ ಎಂದು ಈ ಸಮಿತಿ ಖಚಿತಪಡಿಸುತ್ತದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ರಾಜ್ಯದಲ್ಲಿ ಹಿಂದೆ ನಡೆದ ಹೆಲಿಕಾಪ್ಟರ್ ಅಪಘಾತಗಳ ತನಿಖೆಗಾಗಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಹಿಂದಿನ ಹೆಲಿಕಾಪ್ಟರ್ ಅಪಘಾತಗಳ ಪ್ರತಿಯೊಂದು ಅಂಶವನ್ನು ಹಾಗೂ ಇಂದಿನ ಹೆಲಿಕಾಪ್ಟರ್ ಅಪಘಾತದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ತನ್ನ ವರದಿಯನ್ನು ಸಲ್ಲಿಸುವಂತೆ ಧಾಮಿ ನಿರ್ದೇಶಿಸಿದ್ದಾರೆ.

ಈ ಸಮಿತಿಯು ಪ್ರತಿಯೊಂದು ಘಟನೆಯ ಕಾರಣಗಳನ್ನು ಆಳವಾಗಿ ತನಿಖೆ ಮಾಡುತ್ತದೆ ಮತ್ತು ತಪ್ಪಿತಸ್ಥ ವ್ಯಕ್ತಿಗಳು ಅಥವಾ ಸಂಸ್ಥೆಗಳನ್ನು ಗುರುತಿಸುತ್ತದೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸು ಮಾಡುತ್ತದೆ. ತೀರ್ಥಯಾತ್ರೆ, ವಿಪತ್ತು ನಿರ್ವಹಣೆ ಮತ್ತು ತುರ್ತು ಸೇವೆಗಳಿಗೆ ರಾಜ್ಯದಲ್ಲಿ ಹೆಲಿ ಸೇವೆಗಳ ಮಹತ್ವ ಅಪಾರವಾಗಿದೆ. ಆದ್ದರಿಂದ ಇವುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸಲಾಂ ಇರುವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...