Homeಮುಖಪುಟಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

- Advertisement -
- Advertisement -

ಮಿನಿ ಹೆಲಿಕಾಪ್ಟರ್, ಉಚಿತ ಐಫೋನ್, ಪ್ರತಿ ಮನೆಗೆ ಒಂದು ಕೋಟಿ ವಾರ್ಷಿಕ ಠೇವಣಿ, ಮದುವೆಗಳಿಗೆ ಚಿನ್ನಾಭರಣ, ಮೂರು ಅಂತಸ್ತಿನ ಮನೆ ಮತ್ತು ಚಂದ್ರಯಾನ ಇದೆಲ್ಲಾ ತಮಿಳುನಾಡಿನ ಅಭ್ಯರ್ಥಿಯೊಬ್ಬರು ಮತದಾರರಿಗೆ ನೀಡಿರುವ ಭರವಸೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ 34 ವರ್ಷದ ಪಕ್ಷೇತರ ಅಭ್ಯರ್ಥಿ ತುಳಂ ಸರವಣನ್ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಅವರು ನೀಡಿರುವ ಭರವಸೆಗಳು ಹಾಗೂ ತಾನು ಚುನಾವಣೆಗೆ ಕಣಕ್ಕಿಳಿದಿರುವ ಬಗ್ಗೆ ನೀಡಿರುವ ಕಾರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ತುಳಂ ಸರವಣನ್ ಮತದಾರರಿಗೆ ಉಚಿತ ಐಫೋನ್, ಚಂದ್ರ ಗ್ರಹಕ್ಕೆ 100 ದಿನ ಉಚಿತ ಟ್ರಿಪ್, ಪ್ರತಿ ಮನೆಗೆ 20 ಲಕ್ಷ ರೂಪಾಯಿ ಮೌಲ್ಯದ ಕಾರು, ಹೆಲಿಕಾಪ್ಟರ್, ದೋಣಿ, ಮನೆಕೆಲಸಗಳಿಗೆ ಸಹಾಯ ಮಾಡಲು ಗೃಹಿಣಿಯರಿಗೆ ರೋಬೋಟ್, ಈಜುಕೊಳ ಇರುವ ಮೂರು ಅಂತಸ್ತಿನ ಮನೆ ಮತ್ತು ಯುವಕರಿಗೆ ವ್ಯವಹಾರ ಪ್ರಾರಂಭಿಸಲು 1 ಕೋಟಿ ರೂಪಾಯಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

“ರಾಜಕೀಯ ಪಕ್ಷಗಳಿಂದ ಉಚಿತವಾಗಿ ಸಿಗುವ ವಸ್ತುಗಳ ಹಿಂದೆ ಬೀಳುವ ಜನರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಮತದಾರರು ಸಾಮಾನ್ಯ ವಿನಮ್ರ ವ್ಯಕ್ತಿಗಳಾದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸರವಣನ್ ಹೇಳಿದ್ದಾರೆ.

’ಚುನಾವಣೆಗೆ ನಿಂತಿರುವ ಉದ್ದೇಶ ಕೂರ ರಾಜಕೀಯದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದೇ ಆಗಿದೆ. ನನ್ನ ಚಿಹ್ನೆ ಕೂಡ ಡಸ್ಟ್‌ಬಿನ್ ಆಗಿದೆ. ಇಡೀ ವಿಶ್ವದಲ್ಲಿ ಯಾರೂ ಕೂಡ ನೀಡದಂಥ ಹಾಗೂ ಯಾರೂ ಈಡೇರಿಸಲಾಗದಂಥ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ಧೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದು’ ಎಂದಿದ್ದಾರೆ.

ಇವರ ಭರವಸೆಗಳು ಇಷ್ಟಕ್ಕೆ ನಿಂತಿಲ್ಲ. ಬೇಸಿಗೆಯ ಉಷ್ಣತೆಯ ವಿರುದ್ಧ ಹೋರಾಡಲು ಬಾಹ್ಯಾಕಾಶ ಸಂಶೋಧನಾ ಕೇಂದ್ರ, 300 ಅಡಿ ಎತ್ತರದ ಹಿಮ ಬೆಟ್ಟ, ಮದುವೆಗೆ 800 ಗ್ರಾಂ ಚಿನ್ನ ಮತ್ತು ಚಂದ್ರನ ಪ್ರವಾಸಕ್ಕಾಗಿ ಕ್ಷೇತ್ರದಲ್ಲಿ ರಾಕೆಟ್ ಉಡಾವಣಾ ಪ್ಯಾಡ್ ಸಹ ನಿರ್ಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ತಮ್ಮ ವಯಸ್ಸಾದ ಹೆತ್ತವರೊಂದಿಗೆ ವಾಸಿಸುತ್ತಿರುವ ಸರವಣನ್, ತನ್ನ ನಾಮಪತ್ರಗಳನ್ನು ಸಲ್ಲಿಸಲು 20,000 ರೂಪಾಯಿ ಠೇವಣಿ ಪಾವತಿಸಲು ಬಡ್ಡಿಗಾಗಿ ಹಣವನ್ನು ಎರವಲು ಪಡೆದಿದ್ದೇನೆ ಎಂದು ಹೇಳಿದ್ದಾರೆ.

“ಅಧಿಕಾರದಲ್ಲಿದ್ದಾಗ ರಾಜಕೀಯ ಪಕ್ಷಗಳು ಉದ್ಯೋಗ ಒದಗಿಸಲು, ಕೃಷಿಗಾಗಿ ಅಥವಾ ನದಿಗಳನ್ನು ಜೋಡಿಸಲು ಸಹ ಕೆಲಸ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಹಣವನ್ನು ಎಸೆದು ಜನರಿಗೆ ಆಮಿಷವೊಡ್ಡುತ್ತಾರೆ. ಈ ಪಕ್ಷಗಳು ರಾಜಕೀಯವನ್ನು ಕಲುಷಿತಗೊಳಿಸಿದ್ದಾರೆ ಮತ್ತು ಅದನ್ನು ಶ್ರೀಮಂತರ ಸಂರಕ್ಷಣೆಗಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಪ್ರಚಾರ ನಡೆಸಲು ನನ್ನ ಬಳಿ ಹಣವಿಲ್ಲ. ಆದರೆ ನನ್ನ ವಾಟ್ಸಾಪ್ ಸಂದೇಶವು ವೈರಲ್ ಆಗಿದೆ. ಜನರು ನನ್ನ ಭರವಸೆಗಳ ಬಗ್ಗೆ ಮತ್ತು ಅದರ ಹಿಂದಿನ ಆಲೋಚನೆಯ ಬಗ್ಗೆ ಯೋಚಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೂ ಇದು ನನ್ನ ಗೆಲುವು” ಎಂದು ಸರವಣನ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...