Homeಮುಖಪುಟಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

- Advertisement -
- Advertisement -

ಮಿನಿ ಹೆಲಿಕಾಪ್ಟರ್, ಉಚಿತ ಐಫೋನ್, ಪ್ರತಿ ಮನೆಗೆ ಒಂದು ಕೋಟಿ ವಾರ್ಷಿಕ ಠೇವಣಿ, ಮದುವೆಗಳಿಗೆ ಚಿನ್ನಾಭರಣ, ಮೂರು ಅಂತಸ್ತಿನ ಮನೆ ಮತ್ತು ಚಂದ್ರಯಾನ ಇದೆಲ್ಲಾ ತಮಿಳುನಾಡಿನ ಅಭ್ಯರ್ಥಿಯೊಬ್ಬರು ಮತದಾರರಿಗೆ ನೀಡಿರುವ ಭರವಸೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ 34 ವರ್ಷದ ಪಕ್ಷೇತರ ಅಭ್ಯರ್ಥಿ ತುಳಂ ಸರವಣನ್ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಅವರು ನೀಡಿರುವ ಭರವಸೆಗಳು ಹಾಗೂ ತಾನು ಚುನಾವಣೆಗೆ ಕಣಕ್ಕಿಳಿದಿರುವ ಬಗ್ಗೆ ನೀಡಿರುವ ಕಾರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ತುಳಂ ಸರವಣನ್ ಮತದಾರರಿಗೆ ಉಚಿತ ಐಫೋನ್, ಚಂದ್ರ ಗ್ರಹಕ್ಕೆ 100 ದಿನ ಉಚಿತ ಟ್ರಿಪ್, ಪ್ರತಿ ಮನೆಗೆ 20 ಲಕ್ಷ ರೂಪಾಯಿ ಮೌಲ್ಯದ ಕಾರು, ಹೆಲಿಕಾಪ್ಟರ್, ದೋಣಿ, ಮನೆಕೆಲಸಗಳಿಗೆ ಸಹಾಯ ಮಾಡಲು ಗೃಹಿಣಿಯರಿಗೆ ರೋಬೋಟ್, ಈಜುಕೊಳ ಇರುವ ಮೂರು ಅಂತಸ್ತಿನ ಮನೆ ಮತ್ತು ಯುವಕರಿಗೆ ವ್ಯವಹಾರ ಪ್ರಾರಂಭಿಸಲು 1 ಕೋಟಿ ರೂಪಾಯಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

“ರಾಜಕೀಯ ಪಕ್ಷಗಳಿಂದ ಉಚಿತವಾಗಿ ಸಿಗುವ ವಸ್ತುಗಳ ಹಿಂದೆ ಬೀಳುವ ಜನರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಮತದಾರರು ಸಾಮಾನ್ಯ ವಿನಮ್ರ ವ್ಯಕ್ತಿಗಳಾದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸರವಣನ್ ಹೇಳಿದ್ದಾರೆ.

’ಚುನಾವಣೆಗೆ ನಿಂತಿರುವ ಉದ್ದೇಶ ಕೂರ ರಾಜಕೀಯದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದೇ ಆಗಿದೆ. ನನ್ನ ಚಿಹ್ನೆ ಕೂಡ ಡಸ್ಟ್‌ಬಿನ್ ಆಗಿದೆ. ಇಡೀ ವಿಶ್ವದಲ್ಲಿ ಯಾರೂ ಕೂಡ ನೀಡದಂಥ ಹಾಗೂ ಯಾರೂ ಈಡೇರಿಸಲಾಗದಂಥ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ಧೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದು’ ಎಂದಿದ್ದಾರೆ.

ಇವರ ಭರವಸೆಗಳು ಇಷ್ಟಕ್ಕೆ ನಿಂತಿಲ್ಲ. ಬೇಸಿಗೆಯ ಉಷ್ಣತೆಯ ವಿರುದ್ಧ ಹೋರಾಡಲು ಬಾಹ್ಯಾಕಾಶ ಸಂಶೋಧನಾ ಕೇಂದ್ರ, 300 ಅಡಿ ಎತ್ತರದ ಹಿಮ ಬೆಟ್ಟ, ಮದುವೆಗೆ 800 ಗ್ರಾಂ ಚಿನ್ನ ಮತ್ತು ಚಂದ್ರನ ಪ್ರವಾಸಕ್ಕಾಗಿ ಕ್ಷೇತ್ರದಲ್ಲಿ ರಾಕೆಟ್ ಉಡಾವಣಾ ಪ್ಯಾಡ್ ಸಹ ನಿರ್ಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ತಮ್ಮ ವಯಸ್ಸಾದ ಹೆತ್ತವರೊಂದಿಗೆ ವಾಸಿಸುತ್ತಿರುವ ಸರವಣನ್, ತನ್ನ ನಾಮಪತ್ರಗಳನ್ನು ಸಲ್ಲಿಸಲು 20,000 ರೂಪಾಯಿ ಠೇವಣಿ ಪಾವತಿಸಲು ಬಡ್ಡಿಗಾಗಿ ಹಣವನ್ನು ಎರವಲು ಪಡೆದಿದ್ದೇನೆ ಎಂದು ಹೇಳಿದ್ದಾರೆ.

“ಅಧಿಕಾರದಲ್ಲಿದ್ದಾಗ ರಾಜಕೀಯ ಪಕ್ಷಗಳು ಉದ್ಯೋಗ ಒದಗಿಸಲು, ಕೃಷಿಗಾಗಿ ಅಥವಾ ನದಿಗಳನ್ನು ಜೋಡಿಸಲು ಸಹ ಕೆಲಸ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಹಣವನ್ನು ಎಸೆದು ಜನರಿಗೆ ಆಮಿಷವೊಡ್ಡುತ್ತಾರೆ. ಈ ಪಕ್ಷಗಳು ರಾಜಕೀಯವನ್ನು ಕಲುಷಿತಗೊಳಿಸಿದ್ದಾರೆ ಮತ್ತು ಅದನ್ನು ಶ್ರೀಮಂತರ ಸಂರಕ್ಷಣೆಗಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಪ್ರಚಾರ ನಡೆಸಲು ನನ್ನ ಬಳಿ ಹಣವಿಲ್ಲ. ಆದರೆ ನನ್ನ ವಾಟ್ಸಾಪ್ ಸಂದೇಶವು ವೈರಲ್ ಆಗಿದೆ. ಜನರು ನನ್ನ ಭರವಸೆಗಳ ಬಗ್ಗೆ ಮತ್ತು ಅದರ ಹಿಂದಿನ ಆಲೋಚನೆಯ ಬಗ್ಗೆ ಯೋಚಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೂ ಇದು ನನ್ನ ಗೆಲುವು” ಎಂದು ಸರವಣನ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...