Homeಮುಖಪುಟಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

- Advertisement -
- Advertisement -

ಮಿನಿ ಹೆಲಿಕಾಪ್ಟರ್, ಉಚಿತ ಐಫೋನ್, ಪ್ರತಿ ಮನೆಗೆ ಒಂದು ಕೋಟಿ ವಾರ್ಷಿಕ ಠೇವಣಿ, ಮದುವೆಗಳಿಗೆ ಚಿನ್ನಾಭರಣ, ಮೂರು ಅಂತಸ್ತಿನ ಮನೆ ಮತ್ತು ಚಂದ್ರಯಾನ ಇದೆಲ್ಲಾ ತಮಿಳುನಾಡಿನ ಅಭ್ಯರ್ಥಿಯೊಬ್ಬರು ಮತದಾರರಿಗೆ ನೀಡಿರುವ ಭರವಸೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ 34 ವರ್ಷದ ಪಕ್ಷೇತರ ಅಭ್ಯರ್ಥಿ ತುಳಂ ಸರವಣನ್ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಅವರು ನೀಡಿರುವ ಭರವಸೆಗಳು ಹಾಗೂ ತಾನು ಚುನಾವಣೆಗೆ ಕಣಕ್ಕಿಳಿದಿರುವ ಬಗ್ಗೆ ನೀಡಿರುವ ಕಾರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ತುಳಂ ಸರವಣನ್ ಮತದಾರರಿಗೆ ಉಚಿತ ಐಫೋನ್, ಚಂದ್ರ ಗ್ರಹಕ್ಕೆ 100 ದಿನ ಉಚಿತ ಟ್ರಿಪ್, ಪ್ರತಿ ಮನೆಗೆ 20 ಲಕ್ಷ ರೂಪಾಯಿ ಮೌಲ್ಯದ ಕಾರು, ಹೆಲಿಕಾಪ್ಟರ್, ದೋಣಿ, ಮನೆಕೆಲಸಗಳಿಗೆ ಸಹಾಯ ಮಾಡಲು ಗೃಹಿಣಿಯರಿಗೆ ರೋಬೋಟ್, ಈಜುಕೊಳ ಇರುವ ಮೂರು ಅಂತಸ್ತಿನ ಮನೆ ಮತ್ತು ಯುವಕರಿಗೆ ವ್ಯವಹಾರ ಪ್ರಾರಂಭಿಸಲು 1 ಕೋಟಿ ರೂಪಾಯಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

“ರಾಜಕೀಯ ಪಕ್ಷಗಳಿಂದ ಉಚಿತವಾಗಿ ಸಿಗುವ ವಸ್ತುಗಳ ಹಿಂದೆ ಬೀಳುವ ಜನರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಮತದಾರರು ಸಾಮಾನ್ಯ ವಿನಮ್ರ ವ್ಯಕ್ತಿಗಳಾದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸರವಣನ್ ಹೇಳಿದ್ದಾರೆ.

’ಚುನಾವಣೆಗೆ ನಿಂತಿರುವ ಉದ್ದೇಶ ಕೂರ ರಾಜಕೀಯದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದೇ ಆಗಿದೆ. ನನ್ನ ಚಿಹ್ನೆ ಕೂಡ ಡಸ್ಟ್‌ಬಿನ್ ಆಗಿದೆ. ಇಡೀ ವಿಶ್ವದಲ್ಲಿ ಯಾರೂ ಕೂಡ ನೀಡದಂಥ ಹಾಗೂ ಯಾರೂ ಈಡೇರಿಸಲಾಗದಂಥ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ಧೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದು’ ಎಂದಿದ್ದಾರೆ.

ಇವರ ಭರವಸೆಗಳು ಇಷ್ಟಕ್ಕೆ ನಿಂತಿಲ್ಲ. ಬೇಸಿಗೆಯ ಉಷ್ಣತೆಯ ವಿರುದ್ಧ ಹೋರಾಡಲು ಬಾಹ್ಯಾಕಾಶ ಸಂಶೋಧನಾ ಕೇಂದ್ರ, 300 ಅಡಿ ಎತ್ತರದ ಹಿಮ ಬೆಟ್ಟ, ಮದುವೆಗೆ 800 ಗ್ರಾಂ ಚಿನ್ನ ಮತ್ತು ಚಂದ್ರನ ಪ್ರವಾಸಕ್ಕಾಗಿ ಕ್ಷೇತ್ರದಲ್ಲಿ ರಾಕೆಟ್ ಉಡಾವಣಾ ಪ್ಯಾಡ್ ಸಹ ನಿರ್ಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ತಮ್ಮ ವಯಸ್ಸಾದ ಹೆತ್ತವರೊಂದಿಗೆ ವಾಸಿಸುತ್ತಿರುವ ಸರವಣನ್, ತನ್ನ ನಾಮಪತ್ರಗಳನ್ನು ಸಲ್ಲಿಸಲು 20,000 ರೂಪಾಯಿ ಠೇವಣಿ ಪಾವತಿಸಲು ಬಡ್ಡಿಗಾಗಿ ಹಣವನ್ನು ಎರವಲು ಪಡೆದಿದ್ದೇನೆ ಎಂದು ಹೇಳಿದ್ದಾರೆ.

“ಅಧಿಕಾರದಲ್ಲಿದ್ದಾಗ ರಾಜಕೀಯ ಪಕ್ಷಗಳು ಉದ್ಯೋಗ ಒದಗಿಸಲು, ಕೃಷಿಗಾಗಿ ಅಥವಾ ನದಿಗಳನ್ನು ಜೋಡಿಸಲು ಸಹ ಕೆಲಸ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಹಣವನ್ನು ಎಸೆದು ಜನರಿಗೆ ಆಮಿಷವೊಡ್ಡುತ್ತಾರೆ. ಈ ಪಕ್ಷಗಳು ರಾಜಕೀಯವನ್ನು ಕಲುಷಿತಗೊಳಿಸಿದ್ದಾರೆ ಮತ್ತು ಅದನ್ನು ಶ್ರೀಮಂತರ ಸಂರಕ್ಷಣೆಗಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಪ್ರಚಾರ ನಡೆಸಲು ನನ್ನ ಬಳಿ ಹಣವಿಲ್ಲ. ಆದರೆ ನನ್ನ ವಾಟ್ಸಾಪ್ ಸಂದೇಶವು ವೈರಲ್ ಆಗಿದೆ. ಜನರು ನನ್ನ ಭರವಸೆಗಳ ಬಗ್ಗೆ ಮತ್ತು ಅದರ ಹಿಂದಿನ ಆಲೋಚನೆಯ ಬಗ್ಗೆ ಯೋಚಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೂ ಇದು ನನ್ನ ಗೆಲುವು” ಎಂದು ಸರವಣನ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...