Homeಮುಖಪುಟಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

- Advertisement -
- Advertisement -

ಮಿನಿ ಹೆಲಿಕಾಪ್ಟರ್, ಉಚಿತ ಐಫೋನ್, ಪ್ರತಿ ಮನೆಗೆ ಒಂದು ಕೋಟಿ ವಾರ್ಷಿಕ ಠೇವಣಿ, ಮದುವೆಗಳಿಗೆ ಚಿನ್ನಾಭರಣ, ಮೂರು ಅಂತಸ್ತಿನ ಮನೆ ಮತ್ತು ಚಂದ್ರಯಾನ ಇದೆಲ್ಲಾ ತಮಿಳುನಾಡಿನ ಅಭ್ಯರ್ಥಿಯೊಬ್ಬರು ಮತದಾರರಿಗೆ ನೀಡಿರುವ ಭರವಸೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ 34 ವರ್ಷದ ಪಕ್ಷೇತರ ಅಭ್ಯರ್ಥಿ ತುಳಂ ಸರವಣನ್ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಅವರು ನೀಡಿರುವ ಭರವಸೆಗಳು ಹಾಗೂ ತಾನು ಚುನಾವಣೆಗೆ ಕಣಕ್ಕಿಳಿದಿರುವ ಬಗ್ಗೆ ನೀಡಿರುವ ಕಾರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ತುಳಂ ಸರವಣನ್ ಮತದಾರರಿಗೆ ಉಚಿತ ಐಫೋನ್, ಚಂದ್ರ ಗ್ರಹಕ್ಕೆ 100 ದಿನ ಉಚಿತ ಟ್ರಿಪ್, ಪ್ರತಿ ಮನೆಗೆ 20 ಲಕ್ಷ ರೂಪಾಯಿ ಮೌಲ್ಯದ ಕಾರು, ಹೆಲಿಕಾಪ್ಟರ್, ದೋಣಿ, ಮನೆಕೆಲಸಗಳಿಗೆ ಸಹಾಯ ಮಾಡಲು ಗೃಹಿಣಿಯರಿಗೆ ರೋಬೋಟ್, ಈಜುಕೊಳ ಇರುವ ಮೂರು ಅಂತಸ್ತಿನ ಮನೆ ಮತ್ತು ಯುವಕರಿಗೆ ವ್ಯವಹಾರ ಪ್ರಾರಂಭಿಸಲು 1 ಕೋಟಿ ರೂಪಾಯಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

“ರಾಜಕೀಯ ಪಕ್ಷಗಳಿಂದ ಉಚಿತವಾಗಿ ಸಿಗುವ ವಸ್ತುಗಳ ಹಿಂದೆ ಬೀಳುವ ಜನರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಮತದಾರರು ಸಾಮಾನ್ಯ ವಿನಮ್ರ ವ್ಯಕ್ತಿಗಳಾದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸರವಣನ್ ಹೇಳಿದ್ದಾರೆ.

’ಚುನಾವಣೆಗೆ ನಿಂತಿರುವ ಉದ್ದೇಶ ಕೂರ ರಾಜಕೀಯದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದೇ ಆಗಿದೆ. ನನ್ನ ಚಿಹ್ನೆ ಕೂಡ ಡಸ್ಟ್‌ಬಿನ್ ಆಗಿದೆ. ಇಡೀ ವಿಶ್ವದಲ್ಲಿ ಯಾರೂ ಕೂಡ ನೀಡದಂಥ ಹಾಗೂ ಯಾರೂ ಈಡೇರಿಸಲಾಗದಂಥ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ಧೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದು’ ಎಂದಿದ್ದಾರೆ.

ಇವರ ಭರವಸೆಗಳು ಇಷ್ಟಕ್ಕೆ ನಿಂತಿಲ್ಲ. ಬೇಸಿಗೆಯ ಉಷ್ಣತೆಯ ವಿರುದ್ಧ ಹೋರಾಡಲು ಬಾಹ್ಯಾಕಾಶ ಸಂಶೋಧನಾ ಕೇಂದ್ರ, 300 ಅಡಿ ಎತ್ತರದ ಹಿಮ ಬೆಟ್ಟ, ಮದುವೆಗೆ 800 ಗ್ರಾಂ ಚಿನ್ನ ಮತ್ತು ಚಂದ್ರನ ಪ್ರವಾಸಕ್ಕಾಗಿ ಕ್ಷೇತ್ರದಲ್ಲಿ ರಾಕೆಟ್ ಉಡಾವಣಾ ಪ್ಯಾಡ್ ಸಹ ನಿರ್ಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ತಮ್ಮ ವಯಸ್ಸಾದ ಹೆತ್ತವರೊಂದಿಗೆ ವಾಸಿಸುತ್ತಿರುವ ಸರವಣನ್, ತನ್ನ ನಾಮಪತ್ರಗಳನ್ನು ಸಲ್ಲಿಸಲು 20,000 ರೂಪಾಯಿ ಠೇವಣಿ ಪಾವತಿಸಲು ಬಡ್ಡಿಗಾಗಿ ಹಣವನ್ನು ಎರವಲು ಪಡೆದಿದ್ದೇನೆ ಎಂದು ಹೇಳಿದ್ದಾರೆ.

“ಅಧಿಕಾರದಲ್ಲಿದ್ದಾಗ ರಾಜಕೀಯ ಪಕ್ಷಗಳು ಉದ್ಯೋಗ ಒದಗಿಸಲು, ಕೃಷಿಗಾಗಿ ಅಥವಾ ನದಿಗಳನ್ನು ಜೋಡಿಸಲು ಸಹ ಕೆಲಸ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಹಣವನ್ನು ಎಸೆದು ಜನರಿಗೆ ಆಮಿಷವೊಡ್ಡುತ್ತಾರೆ. ಈ ಪಕ್ಷಗಳು ರಾಜಕೀಯವನ್ನು ಕಲುಷಿತಗೊಳಿಸಿದ್ದಾರೆ ಮತ್ತು ಅದನ್ನು ಶ್ರೀಮಂತರ ಸಂರಕ್ಷಣೆಗಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಪ್ರಚಾರ ನಡೆಸಲು ನನ್ನ ಬಳಿ ಹಣವಿಲ್ಲ. ಆದರೆ ನನ್ನ ವಾಟ್ಸಾಪ್ ಸಂದೇಶವು ವೈರಲ್ ಆಗಿದೆ. ಜನರು ನನ್ನ ಭರವಸೆಗಳ ಬಗ್ಗೆ ಮತ್ತು ಅದರ ಹಿಂದಿನ ಆಲೋಚನೆಯ ಬಗ್ಗೆ ಯೋಚಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೂ ಇದು ನನ್ನ ಗೆಲುವು” ಎಂದು ಸರವಣನ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...