Homeಮುಖಪುಟಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

- Advertisement -
- Advertisement -

ಮಿನಿ ಹೆಲಿಕಾಪ್ಟರ್, ಉಚಿತ ಐಫೋನ್, ಪ್ರತಿ ಮನೆಗೆ ಒಂದು ಕೋಟಿ ವಾರ್ಷಿಕ ಠೇವಣಿ, ಮದುವೆಗಳಿಗೆ ಚಿನ್ನಾಭರಣ, ಮೂರು ಅಂತಸ್ತಿನ ಮನೆ ಮತ್ತು ಚಂದ್ರಯಾನ ಇದೆಲ್ಲಾ ತಮಿಳುನಾಡಿನ ಅಭ್ಯರ್ಥಿಯೊಬ್ಬರು ಮತದಾರರಿಗೆ ನೀಡಿರುವ ಭರವಸೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ 34 ವರ್ಷದ ಪಕ್ಷೇತರ ಅಭ್ಯರ್ಥಿ ತುಳಂ ಸರವಣನ್ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚುನಾವಣೆಗೆ ಅವರು ನೀಡಿರುವ ಭರವಸೆಗಳು ಹಾಗೂ ತಾನು ಚುನಾವಣೆಗೆ ಕಣಕ್ಕಿಳಿದಿರುವ ಬಗ್ಗೆ ನೀಡಿರುವ ಕಾರಣದಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ತುಳಂ ಸರವಣನ್ ಮತದಾರರಿಗೆ ಉಚಿತ ಐಫೋನ್, ಚಂದ್ರ ಗ್ರಹಕ್ಕೆ 100 ದಿನ ಉಚಿತ ಟ್ರಿಪ್, ಪ್ರತಿ ಮನೆಗೆ 20 ಲಕ್ಷ ರೂಪಾಯಿ ಮೌಲ್ಯದ ಕಾರು, ಹೆಲಿಕಾಪ್ಟರ್, ದೋಣಿ, ಮನೆಕೆಲಸಗಳಿಗೆ ಸಹಾಯ ಮಾಡಲು ಗೃಹಿಣಿಯರಿಗೆ ರೋಬೋಟ್, ಈಜುಕೊಳ ಇರುವ ಮೂರು ಅಂತಸ್ತಿನ ಮನೆ ಮತ್ತು ಯುವಕರಿಗೆ ವ್ಯವಹಾರ ಪ್ರಾರಂಭಿಸಲು 1 ಕೋಟಿ ರೂಪಾಯಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

“ರಾಜಕೀಯ ಪಕ್ಷಗಳಿಂದ ಉಚಿತವಾಗಿ ಸಿಗುವ ವಸ್ತುಗಳ ಹಿಂದೆ ಬೀಳುವ ಜನರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಮತದಾರರು ಸಾಮಾನ್ಯ ವಿನಮ್ರ ವ್ಯಕ್ತಿಗಳಾದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸರವಣನ್ ಹೇಳಿದ್ದಾರೆ.

’ಚುನಾವಣೆಗೆ ನಿಂತಿರುವ ಉದ್ದೇಶ ಕೂರ ರಾಜಕೀಯದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದೇ ಆಗಿದೆ. ನನ್ನ ಚಿಹ್ನೆ ಕೂಡ ಡಸ್ಟ್‌ಬಿನ್ ಆಗಿದೆ. ಇಡೀ ವಿಶ್ವದಲ್ಲಿ ಯಾರೂ ಕೂಡ ನೀಡದಂಥ ಹಾಗೂ ಯಾರೂ ಈಡೇರಿಸಲಾಗದಂಥ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ಧೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದು’ ಎಂದಿದ್ದಾರೆ.

ಇವರ ಭರವಸೆಗಳು ಇಷ್ಟಕ್ಕೆ ನಿಂತಿಲ್ಲ. ಬೇಸಿಗೆಯ ಉಷ್ಣತೆಯ ವಿರುದ್ಧ ಹೋರಾಡಲು ಬಾಹ್ಯಾಕಾಶ ಸಂಶೋಧನಾ ಕೇಂದ್ರ, 300 ಅಡಿ ಎತ್ತರದ ಹಿಮ ಬೆಟ್ಟ, ಮದುವೆಗೆ 800 ಗ್ರಾಂ ಚಿನ್ನ ಮತ್ತು ಚಂದ್ರನ ಪ್ರವಾಸಕ್ಕಾಗಿ ಕ್ಷೇತ್ರದಲ್ಲಿ ರಾಕೆಟ್ ಉಡಾವಣಾ ಪ್ಯಾಡ್ ಸಹ ನಿರ್ಮಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ತಮ್ಮ ವಯಸ್ಸಾದ ಹೆತ್ತವರೊಂದಿಗೆ ವಾಸಿಸುತ್ತಿರುವ ಸರವಣನ್, ತನ್ನ ನಾಮಪತ್ರಗಳನ್ನು ಸಲ್ಲಿಸಲು 20,000 ರೂಪಾಯಿ ಠೇವಣಿ ಪಾವತಿಸಲು ಬಡ್ಡಿಗಾಗಿ ಹಣವನ್ನು ಎರವಲು ಪಡೆದಿದ್ದೇನೆ ಎಂದು ಹೇಳಿದ್ದಾರೆ.

“ಅಧಿಕಾರದಲ್ಲಿದ್ದಾಗ ರಾಜಕೀಯ ಪಕ್ಷಗಳು ಉದ್ಯೋಗ ಒದಗಿಸಲು, ಕೃಷಿಗಾಗಿ ಅಥವಾ ನದಿಗಳನ್ನು ಜೋಡಿಸಲು ಸಹ ಕೆಲಸ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಅವರು ಹಣವನ್ನು ಎಸೆದು ಜನರಿಗೆ ಆಮಿಷವೊಡ್ಡುತ್ತಾರೆ. ಈ ಪಕ್ಷಗಳು ರಾಜಕೀಯವನ್ನು ಕಲುಷಿತಗೊಳಿಸಿದ್ದಾರೆ ಮತ್ತು ಅದನ್ನು ಶ್ರೀಮಂತರ ಸಂರಕ್ಷಣೆಗಾಗಿ ಪರಿವರ್ತಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಪ್ರಚಾರ ನಡೆಸಲು ನನ್ನ ಬಳಿ ಹಣವಿಲ್ಲ. ಆದರೆ ನನ್ನ ವಾಟ್ಸಾಪ್ ಸಂದೇಶವು ವೈರಲ್ ಆಗಿದೆ. ಜನರು ನನ್ನ ಭರವಸೆಗಳ ಬಗ್ಗೆ ಮತ್ತು ಅದರ ಹಿಂದಿನ ಆಲೋಚನೆಯ ಬಗ್ಗೆ ಯೋಚಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೂ ಇದು ನನ್ನ ಗೆಲುವು” ಎಂದು ಸರವಣನ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...