Homeಮುಖಪುಟರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು

ರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು

- Advertisement -
- Advertisement -

ಶ್ರೀನಗರ: ಶನಿವಾರ ಮುಂಜಾನೆ ರಾಜೌರಿಯಲ್ಲಿ ಪಾಕಿಸ್ತಾನದ ತೀವ್ರ ಫಿರಂಗಿ ಗುಂಡಿನ ದಾಳಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ (Additional District Development Commissioner) ಮತ್ತು ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ರಾಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ (ADDC) ರಾಜ್ ಕುಮಾರ್ ಥಾಪಾ (55) ಅವರ ಮನೆಯ ಮೇಲೆ ಪಾಕಿಸ್ತಾನದ ಶೆಲ್ ಬಿದ್ದ ನಂತರ ಶನಿವಾರ ಬೆಳಿಗ್ಗೆ ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು X ಪೋಸ್ಟ್ ನಲ್ಲಿ ತಮ್ಮ ಆಘಾತ ಮತ್ತು ಸಂತಾಪ ವ್ಯಕ್ತಪಡಿಸುತ್ತಾ, ಎಡಿಡಿಸಿ ಥಾಪಾ ಅವರು ಉಪಮುಖ್ಯಮಂತ್ರಿ ಸುರೀಂದರ್ ಕುಮಾರ್ ಚೌಧರಿ ಅವರೊಂದಿಗೆ ಜಿಲ್ಲೆಯಾದ್ಯಂತ ಪಾಕಿಸ್ತಾನವು ಭಾರತದ ಮೇಲೆ ನಡೆಸಿದ ದಾಳಿಗಳ ಹಲವಾರು ಸ್ಥಳಗಳನ್ನು, ವಿಶೇಷವಾಗಿ ಯುಟಿಯಲ್ಲಿ ಗುರಿಯಾಗಿಸಿಕೊಂಡು ನಡೆಸಿದ್ದ ದಾಳಿಯನ್ನು ಪರಿಶೀಲಿಸಿದ್ದರು. ಇದಾದ ಒಂದು ದಿನದ ನಂತರ ಈ ದುರದೃಷ್ಟಕರ ಘಟನೆ ಸಂಭವಿಸಿದೆ ಎಂದು ಹೇಳಿದರು. ಥಾಪಾ ಅವರು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಆನ್‌ಲೈನ್ ಸಭೆಯ ಭಾಗವಾಗಿದ್ದರು.

“ರಾಜೌರಿಯಿಂದ ಬಂದಿರುವುದು ಆಘಾತಕಾರಿ ಸುದ್ದಿ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿಯೂ ಭಾಗವಹಿಸಿದ್ದರು. ಇಂದು ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದಾಗ ಅಧಿಕಾರಿಯ ನಿವಾಸಕ್ಕೆ ಗುಂಡು ಹಾರಿಸಲಾಯಿತು, ಇದರ ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪಾ ಸಾವನ್ನಪ್ಪಿದರು. ಈ ಭೀಕರ ಜೀವಹಾನಿಯಿಂದ ನನಗೆ ಆಘಾತವಾಗಿದೆ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಿಎಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಜನರು ಮನೆಯೊಳಗೆ ಇರುವಂತೆ ಅವರು ಮನವಿ ಮಾಡಿದರು. “ವದಂತಿಗಳನ್ನು ನಿರ್ಲಕ್ಷಿಸಿ, ಆಧಾರರಹಿತ ಅಥವಾ ಪರಿಶೀಲಿಸದ ಕಟ್ಟುಕಥೆಗಳನ್ನು ಹರಡಬೇಡಿ ಮತ್ತು ನಾವು ಇದನ್ನು ಒಟ್ಟಿಗೆ ಎದುರಿಸುತ್ತೇವೆ” ಎಂದು ಅವರು ಹೇಳಿದರು.

ಥಾಪಾ ಅವರು ಜಮ್ಮು ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ 1989ರಲ್ಲಿ ಎಂಬಿಬಿಎಸ್ ಪದವೀಧರರಾಗಿದ್ದರು. ಪಾಕಿಸ್ತಾನವು ಸತತ ಎರಡನೇ ರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಅನೇಕ ನಗರಗಳಲ್ಲಿ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳ ಗುಂಪನ್ನು ಉಡಾಯಿಸಿದ ಕೆಲ ಗಂಟೆಗಳ ನಂತರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ.

ಏತನ್ಮಧ್ಯೆ, ಪಾಕಿಸ್ತಾನ ವಾಯುಪಡೆಯ ಕ್ಷಿಪಣಿಗಳು ಶ್ರೀನಗರದ ಮೇಲೆ ದಾಳಿ ಮಾಡಿದಾಗ ಭಾರತವು “ಪರಿಣಾಮಕಾರಿಯಾಗಿ” ಎದುರೇಟು ನೀಡುತ್ತಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಪಿಎಎಫ್ ನಷ್ಟ ಅನುಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ನಡೆಸಿದ ದಾಳಿ ಮತ್ತು ಭಾರತದ ಪ್ರತೀಕಾರದ ಕುರಿತು ಕೇಂದ್ರ ಸರ್ಕಾರ ಬೆಳಿಗ್ಗೆ 10 ಗಂಟೆಗೆ ವಿವರವಾದ ವಿವರಣೆಯನ್ನು ನೀಡಲಿದೆ.

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...