Homeಮುಖಪುಟರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು

ರಾಜೌರಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಹೆಚ್ಚುವರಿ ಜಿಲ್ಲಾಧಿಕಾರಿ, ಇಬ್ಬರು ನಾಗರಿಕರ ಸಾವು

- Advertisement -
- Advertisement -

ಶ್ರೀನಗರ: ಶನಿವಾರ ಮುಂಜಾನೆ ರಾಜೌರಿಯಲ್ಲಿ ಪಾಕಿಸ್ತಾನದ ತೀವ್ರ ಫಿರಂಗಿ ಗುಂಡಿನ ದಾಳಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ (Additional District Development Commissioner) ಮತ್ತು ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ರಾಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ (ADDC) ರಾಜ್ ಕುಮಾರ್ ಥಾಪಾ (55) ಅವರ ಮನೆಯ ಮೇಲೆ ಪಾಕಿಸ್ತಾನದ ಶೆಲ್ ಬಿದ್ದ ನಂತರ ಶನಿವಾರ ಬೆಳಿಗ್ಗೆ ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು X ಪೋಸ್ಟ್ ನಲ್ಲಿ ತಮ್ಮ ಆಘಾತ ಮತ್ತು ಸಂತಾಪ ವ್ಯಕ್ತಪಡಿಸುತ್ತಾ, ಎಡಿಡಿಸಿ ಥಾಪಾ ಅವರು ಉಪಮುಖ್ಯಮಂತ್ರಿ ಸುರೀಂದರ್ ಕುಮಾರ್ ಚೌಧರಿ ಅವರೊಂದಿಗೆ ಜಿಲ್ಲೆಯಾದ್ಯಂತ ಪಾಕಿಸ್ತಾನವು ಭಾರತದ ಮೇಲೆ ನಡೆಸಿದ ದಾಳಿಗಳ ಹಲವಾರು ಸ್ಥಳಗಳನ್ನು, ವಿಶೇಷವಾಗಿ ಯುಟಿಯಲ್ಲಿ ಗುರಿಯಾಗಿಸಿಕೊಂಡು ನಡೆಸಿದ್ದ ದಾಳಿಯನ್ನು ಪರಿಶೀಲಿಸಿದ್ದರು. ಇದಾದ ಒಂದು ದಿನದ ನಂತರ ಈ ದುರದೃಷ್ಟಕರ ಘಟನೆ ಸಂಭವಿಸಿದೆ ಎಂದು ಹೇಳಿದರು. ಥಾಪಾ ಅವರು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಆನ್‌ಲೈನ್ ಸಭೆಯ ಭಾಗವಾಗಿದ್ದರು.

“ರಾಜೌರಿಯಿಂದ ಬಂದಿರುವುದು ಆಘಾತಕಾರಿ ಸುದ್ದಿ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿಯೂ ಭಾಗವಹಿಸಿದ್ದರು. ಇಂದು ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದಾಗ ಅಧಿಕಾರಿಯ ನಿವಾಸಕ್ಕೆ ಗುಂಡು ಹಾರಿಸಲಾಯಿತು, ಇದರ ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪಾ ಸಾವನ್ನಪ್ಪಿದರು. ಈ ಭೀಕರ ಜೀವಹಾನಿಯಿಂದ ನನಗೆ ಆಘಾತವಾಗಿದೆ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಿಎಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಜನರು ಮನೆಯೊಳಗೆ ಇರುವಂತೆ ಅವರು ಮನವಿ ಮಾಡಿದರು. “ವದಂತಿಗಳನ್ನು ನಿರ್ಲಕ್ಷಿಸಿ, ಆಧಾರರಹಿತ ಅಥವಾ ಪರಿಶೀಲಿಸದ ಕಟ್ಟುಕಥೆಗಳನ್ನು ಹರಡಬೇಡಿ ಮತ್ತು ನಾವು ಇದನ್ನು ಒಟ್ಟಿಗೆ ಎದುರಿಸುತ್ತೇವೆ” ಎಂದು ಅವರು ಹೇಳಿದರು.

ಥಾಪಾ ಅವರು ಜಮ್ಮು ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ 1989ರಲ್ಲಿ ಎಂಬಿಬಿಎಸ್ ಪದವೀಧರರಾಗಿದ್ದರು. ಪಾಕಿಸ್ತಾನವು ಸತತ ಎರಡನೇ ರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಅನೇಕ ನಗರಗಳಲ್ಲಿ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳ ಗುಂಪನ್ನು ಉಡಾಯಿಸಿದ ಕೆಲ ಗಂಟೆಗಳ ನಂತರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ.

ಏತನ್ಮಧ್ಯೆ, ಪಾಕಿಸ್ತಾನ ವಾಯುಪಡೆಯ ಕ್ಷಿಪಣಿಗಳು ಶ್ರೀನಗರದ ಮೇಲೆ ದಾಳಿ ಮಾಡಿದಾಗ ಭಾರತವು “ಪರಿಣಾಮಕಾರಿಯಾಗಿ” ಎದುರೇಟು ನೀಡುತ್ತಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಪಿಎಎಫ್ ನಷ್ಟ ಅನುಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ನಡೆಸಿದ ದಾಳಿ ಮತ್ತು ಭಾರತದ ಪ್ರತೀಕಾರದ ಕುರಿತು ಕೇಂದ್ರ ಸರ್ಕಾರ ಬೆಳಿಗ್ಗೆ 10 ಗಂಟೆಗೆ ವಿವರವಾದ ವಿವರಣೆಯನ್ನು ನೀಡಲಿದೆ.

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...