Homeಮುಖಪುಟಸಲಾಂ ಇರುವೆ!

ಸಲಾಂ ಇರುವೆ!

- Advertisement -
- Advertisement -

ಒಮ್ಮೆ ಒಂದು ದಿನ ಬೆಳಂಬೆಳಗ್ಗೆ ನನಗೆ ಸಹಜವಾಗಿ ಎಚ್ಚರವಾದಾಗ, ಏನೊ ಒಂದು ಅದ್ಭುತ ನನ್ನ ಗಮನಕ್ಕೆ ಬಂತು. ಹಿಂದಿನ ರಾತ್ರಿ ನಾನು ಮಲಗುವ ಮುಂಚೆ ಐದು ಲೀಟರ್ ನೀರಿನ ಬಾಟಲಿಯ ಮುಚ್ಚಳವನ್ನು ಮುಚ್ಚದೆ ಹಾಗೆ ಇರಿಸಿದ್ದರಿಂದ ಅದರೊಳಗಡೆ ಹಲವು ಡಜನ್ ಇರುವೆಗಳು ಬಿದ್ದುಬಿಟ್ಟಿದ್ದವು. ಪಾಪ! ಪ್ರತಿಯೊಂದೂ ಇರುವೆಗಳು ಸಾವುನೋವಿನಿಂದ ನರಳುತ್ತಾ ತಮ್ಮ ಉಳಿವಿಗಾಗಿ ಹೋರಾಡುತ್ತಾ ಬಾಟಲಿಯೊಳಗಡೆ ಇದ್ದ ನೀರಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡು ಸಹಾಯಕ್ಕಾಗಿ ಕೈಚಾಚಿದ್ದವು.

ಮೊದಲು ನನಗೆ ಈ ಇರುವೆಗಳು ಒಂದೊಂದಾಗಿ ನೀರಿನಲ್ಲಿ ಮುಳುಗುತ್ತಾ ಇದ್ದಾವೇನೋ, ಕೆಲವು ಇರುವೆಗಳಂತೂ ಮುಳುಗಿ ಸತ್ತ ಇತರ ಇರುವೆಗಳ ಮೇಲೇರಿ ತಮ್ಮ ಜೀವ ಉಳಿಸಿಕೊಳ್ಳುತ್ತಿದ್ದವೇನೋ ಅಂದುಕೊಂಡೆ.

ಈ ರೀತಿ ಅಂದುಕೊಂಡಿದ್ದು ನಂತರ ನನಗೆ ಅಸಹ್ಯ ತರಿಸಿತು ಮತ್ತು ನಾನು ಇವುಗಳ ತಂಟೆಗೆ ಹೋಗದೆ ಹಾಗೆ ಇದ್ದುಬಿಟ್ಟೆ. ಸುಮಾರು ಎರಡು ಗಂಟೆ ಕಳೆದ ನಂತರ ನನಗೆ ಯಾಕೋ ಏನೋ ಕುತೂಹಲ ಉಂಟಾಯಿತು. ಮತ್ತೆ ನಾನು ಇರುವೆಗಳು ಬಿದ್ದಿದ್ದ ಈ ನೀರಿನ ಬಾಟಲಿಯೊಳಗೆ ಇಣುಕಿ ನೋಡಿದೆ. ಆಗ ನಾನು ಬೆಕ್ಕಸಬೆರಗುಗೊಂಡೆ; ಎಲ್ಲಾ ಇರುವೆಗಳು ಜೀವಂತವಾಗಿದ್ದು ಇದಕ್ಕೆ ಕಾರಣವಾಗಿತ್ತು! ಇಷ್ಟು ಸಮಯದಲ್ಲಿ ಅವುಗಳು ಒಂದಕ್ಕೊಂದು ಭಾರ ಹೊರುತ್ತಾ ನೈಜ ‘ದ್ವೀಪ ಪ್ರದೇಶ’ದಲ್ಲಿ ಪಿರಮಿಡ್ ಅನ್ನು ಕಟ್ಟಿಕೊಂಡಿದ್ದವು. ಅದರಲ್ಲಿ ಕೆಲವು ಇತರ ಇರುವೆಗಳ ಬೆಂಬಲ ಪಡೆದುಕೊಂಡು ಪಾಳೆ ಪ್ರಕಾರ ಕೆಳಗಡೆ ನೀರಿನಲ್ಲಿ ತೇಲುತ್ತಿದ್ದವು.

ನನ್ನ ಉಸಿರು ಬಿಗಿಹಿಡಿದು ಇದನ್ನೆಲ್ಲಾ ನೋಡುತ್ತಾ ಕುಳಿತೆ. ಈ ಇರುವೆಗಳು ಪಿರಮಿಡ್ ಕಟ್ಟಿದಾಗ ಕೆಳಭಾಗದಲ್ಲಿದ್ದಂತಹವು ನಿಜವಾಗಿಯೂ ನೀರಿನಲ್ಲಿ ಮುಳುಗಿದ್ದವು, ಆದರೆ ಕೆಳಗಡೆ ಮುಳುಗಿದ್ದಂತಹ ಇರುವೆಗಳು ಹಾಗೆ ಮುಳುಗಿಕೊಂಡೇ ಇರಲಿಲ್ಲ. ಸ್ವಲ್ಪ ಸಮಯದ ನಂತರ ಮೇಲಿದ್ದ ಇರುವೆಗಳು ತಾವೇ ಸ್ವತಃ ಕೆಳಗಿಳಿಯುತ್ತಿದ್ದವು. ಕಳೆಗೆ ನೀರಿನಲ್ಲಿ ಮುಳುಗಿದ್ದ ಇರುವೆಗಳು ಆತುರಪಡದೆ, ಇತರ ಇರುವೆಗಳನ್ನು ತಳ್ಳದೆ ಮೇಲಕ್ಕೆ ಹೋದವು!

ಯಾವೊಂದು ಇರುವೆಗಳು ಕೂಡ ತಾವು ಮಾತ್ರ ಬದುಕಿ ಉಳಿಯಬೇಕೆಂಬ ಕಡೆ ಪ್ರಯತ್ನ ಹಾಕಲಿಲ್ಲ. ಇದಕ್ಕೆ ಬದಲಾಗಿ, ಪ್ರತಿಯೊಂದು ಇರುವೆಗಳು ಈ ಪಿರಮಿಡ್ಡಿನಲ್ಲಿ ಅತ್ಯಂತ ಕಷ್ಟಕರವಾದ ಸ್ಥಳವಾದ ಕೆಳಭಾಗಕ್ಕೆ ಹೋಗಲು ಪ್ರಯತ್ನಿಸಿದವು. ಒಂದಕ್ಕೊಂದು ಸಹಕರಿಸುತ್ತ ಈ ಪಿರಮಿಡ್ ವ್ಯವಸ್ಥೆಯಲ್ಲಿ ಪಾಲ್ಗೊಂಡಿದ್ದು ನನ್ನ ಹೃದಯಕ್ಕೆ ತಟ್ಟಿತು.

ನಾನು ಇದನ್ನೆಲ್ಲಾ ನೋಡುತ್ತಾ ಬೇರೆ ಏನೋ ಮಾಡಲು ಹೋಗಲಿಲ್ಲ. ಬಾಟಲಿಯ ತುದಿ ಭಾಗದಿಂದ ಬಹಳ ಸುಲಭವಾಗಿ ಒಂದು ಚಮಚವನ್ನು ಒಳ ತೂರಿಸಬಹುದೆಂದು ನನಗೆ ಹೊಳೆಯಿತು ಮತ್ತು ಬಹಳ ಎಚ್ಚರಿಕೆಯಿಂದ ಬಾಟಲಿಯೊಳಗೆ ಚಮಚವನ್ನು ತೂರಿಸಿದೆ. ತಮ್ಮ ಪ್ರಾಣಭಿಕ್ಷೆಗಾಗಿ ಕಾಯುತ್ತಿದ್ದ ಇರುವೆಗಳು ಒಂದಿನಿತು ಬೆದರದೆ ಒಂದೊಂದಾಗಿ ಬಾಟಲಿಯಿಂದ ಹೊರಬರಲು ಪ್ರಾರಂಭಿಸಿದವು.

ಇದೆಲ್ಲವೂ ಸರಾಗವಾಗಿಯೇ ನಡೆಯುತ್ತಿತ್ತು. ಇವುಗಳಲ್ಲಿ ಒಂದು ಇರುವೆ ಬಳಲಿ ಬೆಂಡಾಗಿ, ಮೇಲಕ್ಕೆ ಬರಲಾಗದೆ ಮತ್ತೆ ನೀರಿಗೆ ಬಿತ್ತು ಮತ್ತು ನನ್ನ ಜೀವಮಾನದುದ್ದಕ್ಕೂ ನೆನಪಿಡುವ ಪ್ರಸಂಗವೊಂದು ಅಲ್ಲಿ ನಡೆಯಿತು.

ಬಹುತೇಕ ಹೊರಗೆ ಬಂದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದ ಕೊನೆಯ ಇರುವೆ ಇದ್ದಕ್ಕಿದ್ದಂತೆ ಮತ್ತೆ ಪ್ರಾಣಾಪಾಯವಿರುವ ಬಾಟಲಿಯ ನೀರಿನೊಳಕ್ಕೆ ನುಗ್ಗಿತು. ಅದು ಕೆಳಗೆ ಬಂದು, “ತಾಳ್ಮೆಯಿಂದ ಇರು ಸಹೋದರಿ, ನಾನು ನಿನ್ನನ್ನು ಇಲ್ಲಿ ಸಾಯಲು ಬಿಡುವುದಿಲ್ಲ!” ಎಂದು ಹೇಳುವಂತೆ ಭಾಸವಾಯಿತು.

ಅವಳು ನೀರಿನಲ್ಲಿ ಪ್ರೀತಿಯನ್ನು ಬೆರಸಿದಳು. ಮುಳುಗುತ್ತಿದ್ದವಳಿಗೆ ಬಿಗಿಯಾಗಿ ಅಂಟಿಕೊಂಡಳು. ಆದರೆ ಅವಳು ಅವಳನ್ನು ತಾನೇ ಸ್ವತಃ ಹೊರತೆಗೆಯಲು ಸಾಧ್ಯವಾಗಲಿಲ್ಲ. ಇದನ್ನೆಲ್ಲಾ ನೋಡುತ್ತಾ ಇದ್ದ ನಾನು ಮತ್ತೆ ಏನೋ ಮಾಡಲು ಹೋಗಲಿಲ್ಲ, ನಾನು ಚಮಚವನ್ನು ಅವುಗಳ ಹತ್ತಿರಕ್ಕೆ ಹಿಡಿದೆ. ನಂತರ ಈ ಗೆಳತಿಯರಿಬ್ಬರೂ ಜೀವಂತವಾಗಿ ಒಟ್ಟಿಗೆ ಹೊರಬಂದರು.

ಜೀವಕ್ಕೆ ಜೀವ ನೀಡುವ ಸ್ನೇಹ ಮತ್ತು ತ್ಯಾಗದ ಕುರಿತು ಇರುವ ಯಾವುದೇ ಚಲನಚಿತ್ರ ಅಥವಾ ಪುಸ್ತಕಕ್ಕಿಂತ ಹೆಚ್ಚಾಗಿ ಈ ಘಟನೆ ನನ್ನನ್ನು ಮನಕಲಿಕಿತು. ನನ್ನಲ್ಲಿ ಭಾವನೆಗಳ ಬಿರುಗಾಳಿಯೇ ಬೀಸಿತು: ಈ ಇರುವೆಗಳನ್ನು ಅಸೂಕ್ಷ್ಮ ಜೀವಿಗಳೆಂದು ನಾನು ಅಂದುಕೊಂಡಿದ್ದಕ್ಕೆ ನನಗೆ ನಾನು ಖಂಡಿಸಿಕೊಳ್ಳುತ್ತೇನೆ. ನಂತರ ಆ ಒಂದು ಇರುವೆಯ ಪ್ರತಿರೋಧಕ್ಕೆ ಬೆಕ್ಕಸಬೆರಗು ವ್ಯಕ್ತಪಡಿಸುತ್ತೇನೆ; ಅವಳ ಶಿಸ್ತು ಮತ್ತು ಕೆಚ್ಚೆದೆಯ ತ್ಯಾಗಕ್ಕೆ ಒಂದು ಮೆಚ್ಚುಗೆ ಇರಲಿ… ಮತ್ತು ಕೊನೆಯಲ್ಲಿ ನನಗೆ ನಾಚಿಕೆಯಾಗಬೇಕು.

ಇದನ್ನೆಲ್ಲಾ ನೋಡುವಾಗ ಮನುಷ್ಯ ಕುಲಕ್ಕೆ ನಾಚಿಕೆಯಾಗಬೇಕು. ನಮಗೆ ನಮ್ಮಗಳ ಜೀವವೇ ಮುಖ್ಯ. ನಾವು ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಲಾಭದ ಪ್ರಯೋಜನಗಳನ್ನು ಪಡೆದುಕೊಳ್ಳುವುದಿಲ್ಲ. ಸಮಾಜದಲ್ಲಿ ಸಂಕಷ್ಟಕ್ಕೊಳಪಟ್ಟವರನ್ನು ಮೇಲಕ್ಕೆತ್ತಲು ಪ್ರಯತ್ನ ಪಡುವುದು ಅಪರೂಪ. ಪರಸ್ಪರರಿಗೆ ಸಹಾಯವಾಗುವಂತಹ ಸೇತುವೆಗಳನ್ನು ನಿರ್ಮಿಸುವ ಬದಲು ನಾವು ಗೋಡೆಗಳನ್ನು ಕಟ್ಟುತ್ತಿದ್ದೇವೆ.

ಇರುವೆಗಳು ತುಂಬಾ ಸಣ್ಣ ಜೀವಿಗಳು. ಅವುಗಳೇ ಪರಸ್ಪರ ಸಹಾಯ, ನಿಸ್ವಾರ್ಥ ಗುಣಗಳಿಗೆ ಸಮರ್ಥವಾಗಿದ್ದರೆ, ನಾವು ಮನುಷ್ಯರು ಇತರರ ದುಃಖಕ್ಕೆ ಕಿವುಡರಾಗಿರುವುದು ಏಕೆ?

ಆ ದಿನ ನನಗೆ ಒಂದು ವಿಷಯ ಅರ್ಥವಾಯಿತು: ನಮ್ಮಗಳ ಶಕ್ತಿ ನಾವುಗಳು ಒಗ್ಗೂಡುವುದರಲ್ಲಿದೆ ಮತ್ತು ಯಾರಾದರೂ ಇನ್ನೂ ಸರಿಯಾಗಿ ಬದುಕುವುದು ಹೇಗೆ ಎಂದು ತಿಳಿದಿಲ್ಲದಿದ್ದರೆ, ಅವರು ಇರುವೆಗಳಿಂದ ಪಾಠ ಕಲಿಯಲಿ.

ಇಂಗ್ಲೀಷ್ ಮೂಲ: ಲಲಿತ

ಕನ್ನಡಕ್ಕೆ: ಪೃಥ್ವಿ ಕಣಸೋಗಿ

ಆಹಾರ ಭದ್ರತೆಯ ಖಾತ್ರಿಗಾಗಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...