Homeಮುಖಪುಟಸಲಾಂ ಇರುವೆ!

ಸಲಾಂ ಇರುವೆ!

- Advertisement -
- Advertisement -

ಒಮ್ಮೆ ಒಂದು ದಿನ ಬೆಳಂಬೆಳಗ್ಗೆ ನನಗೆ ಸಹಜವಾಗಿ ಎಚ್ಚರವಾದಾಗ, ಏನೊ ಒಂದು ಅದ್ಭುತ ನನ್ನ ಗಮನಕ್ಕೆ ಬಂತು. ಹಿಂದಿನ ರಾತ್ರಿ ನಾನು ಮಲಗುವ ಮುಂಚೆ ಐದು ಲೀಟರ್ ನೀರಿನ ಬಾಟಲಿಯ ಮುಚ್ಚಳವನ್ನು ಮುಚ್ಚದೆ ಹಾಗೆ ಇರಿಸಿದ್ದರಿಂದ ಅದರೊಳಗಡೆ ಹಲವು ಡಜನ್ ಇರುವೆಗಳು ಬಿದ್ದುಬಿಟ್ಟಿದ್ದವು. ಪಾಪ! ಪ್ರತಿಯೊಂದೂ ಇರುವೆಗಳು ಸಾವುನೋವಿನಿಂದ ನರಳುತ್ತಾ ತಮ್ಮ ಉಳಿವಿಗಾಗಿ ಹೋರಾಡುತ್ತಾ ಬಾಟಲಿಯೊಳಗಡೆ ಇದ್ದ ನೀರಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡು ಸಹಾಯಕ್ಕಾಗಿ ಕೈಚಾಚಿದ್ದವು.

ಮೊದಲು ನನಗೆ ಈ ಇರುವೆಗಳು ಒಂದೊಂದಾಗಿ ನೀರಿನಲ್ಲಿ ಮುಳುಗುತ್ತಾ ಇದ್ದಾವೇನೋ, ಕೆಲವು ಇರುವೆಗಳಂತೂ ಮುಳುಗಿ ಸತ್ತ ಇತರ ಇರುವೆಗಳ ಮೇಲೇರಿ ತಮ್ಮ ಜೀವ ಉಳಿಸಿಕೊಳ್ಳುತ್ತಿದ್ದವೇನೋ ಅಂದುಕೊಂಡೆ.

ಈ ರೀತಿ ಅಂದುಕೊಂಡಿದ್ದು ನಂತರ ನನಗೆ ಅಸಹ್ಯ ತರಿಸಿತು ಮತ್ತು ನಾನು ಇವುಗಳ ತಂಟೆಗೆ ಹೋಗದೆ ಹಾಗೆ ಇದ್ದುಬಿಟ್ಟೆ. ಸುಮಾರು ಎರಡು ಗಂಟೆ ಕಳೆದ ನಂತರ ನನಗೆ ಯಾಕೋ ಏನೋ ಕುತೂಹಲ ಉಂಟಾಯಿತು. ಮತ್ತೆ ನಾನು ಇರುವೆಗಳು ಬಿದ್ದಿದ್ದ ಈ ನೀರಿನ ಬಾಟಲಿಯೊಳಗೆ ಇಣುಕಿ ನೋಡಿದೆ. ಆಗ ನಾನು ಬೆಕ್ಕಸಬೆರಗುಗೊಂಡೆ; ಎಲ್ಲಾ ಇರುವೆಗಳು ಜೀವಂತವಾಗಿದ್ದು ಇದಕ್ಕೆ ಕಾರಣವಾಗಿತ್ತು! ಇಷ್ಟು ಸಮಯದಲ್ಲಿ ಅವುಗಳು ಒಂದಕ್ಕೊಂದು ಭಾರ ಹೊರುತ್ತಾ ನೈಜ ‘ದ್ವೀಪ ಪ್ರದೇಶ’ದಲ್ಲಿ ಪಿರಮಿಡ್ ಅನ್ನು ಕಟ್ಟಿಕೊಂಡಿದ್ದವು. ಅದರಲ್ಲಿ ಕೆಲವು ಇತರ ಇರುವೆಗಳ ಬೆಂಬಲ ಪಡೆದುಕೊಂಡು ಪಾಳೆ ಪ್ರಕಾರ ಕೆಳಗಡೆ ನೀರಿನಲ್ಲಿ ತೇಲುತ್ತಿದ್ದವು.

ನನ್ನ ಉಸಿರು ಬಿಗಿಹಿಡಿದು ಇದನ್ನೆಲ್ಲಾ ನೋಡುತ್ತಾ ಕುಳಿತೆ. ಈ ಇರುವೆಗಳು ಪಿರಮಿಡ್ ಕಟ್ಟಿದಾಗ ಕೆಳಭಾಗದಲ್ಲಿದ್ದಂತಹವು ನಿಜವಾಗಿಯೂ ನೀರಿನಲ್ಲಿ ಮುಳುಗಿದ್ದವು, ಆದರೆ ಕೆಳಗಡೆ ಮುಳುಗಿದ್ದಂತಹ ಇರುವೆಗಳು ಹಾಗೆ ಮುಳುಗಿಕೊಂಡೇ ಇರಲಿಲ್ಲ. ಸ್ವಲ್ಪ ಸಮಯದ ನಂತರ ಮೇಲಿದ್ದ ಇರುವೆಗಳು ತಾವೇ ಸ್ವತಃ ಕೆಳಗಿಳಿಯುತ್ತಿದ್ದವು. ಕಳೆಗೆ ನೀರಿನಲ್ಲಿ ಮುಳುಗಿದ್ದ ಇರುವೆಗಳು ಆತುರಪಡದೆ, ಇತರ ಇರುವೆಗಳನ್ನು ತಳ್ಳದೆ ಮೇಲಕ್ಕೆ ಹೋದವು!

ಯಾವೊಂದು ಇರುವೆಗಳು ಕೂಡ ತಾವು ಮಾತ್ರ ಬದುಕಿ ಉಳಿಯಬೇಕೆಂಬ ಕಡೆ ಪ್ರಯತ್ನ ಹಾಕಲಿಲ್ಲ. ಇದಕ್ಕೆ ಬದಲಾಗಿ, ಪ್ರತಿಯೊಂದು ಇರುವೆಗಳು ಈ ಪಿರಮಿಡ್ಡಿನಲ್ಲಿ ಅತ್ಯಂತ ಕಷ್ಟಕರವಾದ ಸ್ಥಳವಾದ ಕೆಳಭಾಗಕ್ಕೆ ಹೋಗಲು ಪ್ರಯತ್ನಿಸಿದವು. ಒಂದಕ್ಕೊಂದು ಸಹಕರಿಸುತ್ತ ಈ ಪಿರಮಿಡ್ ವ್ಯವಸ್ಥೆಯಲ್ಲಿ ಪಾಲ್ಗೊಂಡಿದ್ದು ನನ್ನ ಹೃದಯಕ್ಕೆ ತಟ್ಟಿತು.

ನಾನು ಇದನ್ನೆಲ್ಲಾ ನೋಡುತ್ತಾ ಬೇರೆ ಏನೋ ಮಾಡಲು ಹೋಗಲಿಲ್ಲ. ಬಾಟಲಿಯ ತುದಿ ಭಾಗದಿಂದ ಬಹಳ ಸುಲಭವಾಗಿ ಒಂದು ಚಮಚವನ್ನು ಒಳ ತೂರಿಸಬಹುದೆಂದು ನನಗೆ ಹೊಳೆಯಿತು ಮತ್ತು ಬಹಳ ಎಚ್ಚರಿಕೆಯಿಂದ ಬಾಟಲಿಯೊಳಗೆ ಚಮಚವನ್ನು ತೂರಿಸಿದೆ. ತಮ್ಮ ಪ್ರಾಣಭಿಕ್ಷೆಗಾಗಿ ಕಾಯುತ್ತಿದ್ದ ಇರುವೆಗಳು ಒಂದಿನಿತು ಬೆದರದೆ ಒಂದೊಂದಾಗಿ ಬಾಟಲಿಯಿಂದ ಹೊರಬರಲು ಪ್ರಾರಂಭಿಸಿದವು.

ಇದೆಲ್ಲವೂ ಸರಾಗವಾಗಿಯೇ ನಡೆಯುತ್ತಿತ್ತು. ಇವುಗಳಲ್ಲಿ ಒಂದು ಇರುವೆ ಬಳಲಿ ಬೆಂಡಾಗಿ, ಮೇಲಕ್ಕೆ ಬರಲಾಗದೆ ಮತ್ತೆ ನೀರಿಗೆ ಬಿತ್ತು ಮತ್ತು ನನ್ನ ಜೀವಮಾನದುದ್ದಕ್ಕೂ ನೆನಪಿಡುವ ಪ್ರಸಂಗವೊಂದು ಅಲ್ಲಿ ನಡೆಯಿತು.

ಬಹುತೇಕ ಹೊರಗೆ ಬಂದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದ ಕೊನೆಯ ಇರುವೆ ಇದ್ದಕ್ಕಿದ್ದಂತೆ ಮತ್ತೆ ಪ್ರಾಣಾಪಾಯವಿರುವ ಬಾಟಲಿಯ ನೀರಿನೊಳಕ್ಕೆ ನುಗ್ಗಿತು. ಅದು ಕೆಳಗೆ ಬಂದು, “ತಾಳ್ಮೆಯಿಂದ ಇರು ಸಹೋದರಿ, ನಾನು ನಿನ್ನನ್ನು ಇಲ್ಲಿ ಸಾಯಲು ಬಿಡುವುದಿಲ್ಲ!” ಎಂದು ಹೇಳುವಂತೆ ಭಾಸವಾಯಿತು.

ಅವಳು ನೀರಿನಲ್ಲಿ ಪ್ರೀತಿಯನ್ನು ಬೆರಸಿದಳು. ಮುಳುಗುತ್ತಿದ್ದವಳಿಗೆ ಬಿಗಿಯಾಗಿ ಅಂಟಿಕೊಂಡಳು. ಆದರೆ ಅವಳು ಅವಳನ್ನು ತಾನೇ ಸ್ವತಃ ಹೊರತೆಗೆಯಲು ಸಾಧ್ಯವಾಗಲಿಲ್ಲ. ಇದನ್ನೆಲ್ಲಾ ನೋಡುತ್ತಾ ಇದ್ದ ನಾನು ಮತ್ತೆ ಏನೋ ಮಾಡಲು ಹೋಗಲಿಲ್ಲ, ನಾನು ಚಮಚವನ್ನು ಅವುಗಳ ಹತ್ತಿರಕ್ಕೆ ಹಿಡಿದೆ. ನಂತರ ಈ ಗೆಳತಿಯರಿಬ್ಬರೂ ಜೀವಂತವಾಗಿ ಒಟ್ಟಿಗೆ ಹೊರಬಂದರು.

ಜೀವಕ್ಕೆ ಜೀವ ನೀಡುವ ಸ್ನೇಹ ಮತ್ತು ತ್ಯಾಗದ ಕುರಿತು ಇರುವ ಯಾವುದೇ ಚಲನಚಿತ್ರ ಅಥವಾ ಪುಸ್ತಕಕ್ಕಿಂತ ಹೆಚ್ಚಾಗಿ ಈ ಘಟನೆ ನನ್ನನ್ನು ಮನಕಲಿಕಿತು. ನನ್ನಲ್ಲಿ ಭಾವನೆಗಳ ಬಿರುಗಾಳಿಯೇ ಬೀಸಿತು: ಈ ಇರುವೆಗಳನ್ನು ಅಸೂಕ್ಷ್ಮ ಜೀವಿಗಳೆಂದು ನಾನು ಅಂದುಕೊಂಡಿದ್ದಕ್ಕೆ ನನಗೆ ನಾನು ಖಂಡಿಸಿಕೊಳ್ಳುತ್ತೇನೆ. ನಂತರ ಆ ಒಂದು ಇರುವೆಯ ಪ್ರತಿರೋಧಕ್ಕೆ ಬೆಕ್ಕಸಬೆರಗು ವ್ಯಕ್ತಪಡಿಸುತ್ತೇನೆ; ಅವಳ ಶಿಸ್ತು ಮತ್ತು ಕೆಚ್ಚೆದೆಯ ತ್ಯಾಗಕ್ಕೆ ಒಂದು ಮೆಚ್ಚುಗೆ ಇರಲಿ… ಮತ್ತು ಕೊನೆಯಲ್ಲಿ ನನಗೆ ನಾಚಿಕೆಯಾಗಬೇಕು.

ಇದನ್ನೆಲ್ಲಾ ನೋಡುವಾಗ ಮನುಷ್ಯ ಕುಲಕ್ಕೆ ನಾಚಿಕೆಯಾಗಬೇಕು. ನಮಗೆ ನಮ್ಮಗಳ ಜೀವವೇ ಮುಖ್ಯ. ನಾವು ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಲಾಭದ ಪ್ರಯೋಜನಗಳನ್ನು ಪಡೆದುಕೊಳ್ಳುವುದಿಲ್ಲ. ಸಮಾಜದಲ್ಲಿ ಸಂಕಷ್ಟಕ್ಕೊಳಪಟ್ಟವರನ್ನು ಮೇಲಕ್ಕೆತ್ತಲು ಪ್ರಯತ್ನ ಪಡುವುದು ಅಪರೂಪ. ಪರಸ್ಪರರಿಗೆ ಸಹಾಯವಾಗುವಂತಹ ಸೇತುವೆಗಳನ್ನು ನಿರ್ಮಿಸುವ ಬದಲು ನಾವು ಗೋಡೆಗಳನ್ನು ಕಟ್ಟುತ್ತಿದ್ದೇವೆ.

ಇರುವೆಗಳು ತುಂಬಾ ಸಣ್ಣ ಜೀವಿಗಳು. ಅವುಗಳೇ ಪರಸ್ಪರ ಸಹಾಯ, ನಿಸ್ವಾರ್ಥ ಗುಣಗಳಿಗೆ ಸಮರ್ಥವಾಗಿದ್ದರೆ, ನಾವು ಮನುಷ್ಯರು ಇತರರ ದುಃಖಕ್ಕೆ ಕಿವುಡರಾಗಿರುವುದು ಏಕೆ?

ಆ ದಿನ ನನಗೆ ಒಂದು ವಿಷಯ ಅರ್ಥವಾಯಿತು: ನಮ್ಮಗಳ ಶಕ್ತಿ ನಾವುಗಳು ಒಗ್ಗೂಡುವುದರಲ್ಲಿದೆ ಮತ್ತು ಯಾರಾದರೂ ಇನ್ನೂ ಸರಿಯಾಗಿ ಬದುಕುವುದು ಹೇಗೆ ಎಂದು ತಿಳಿದಿಲ್ಲದಿದ್ದರೆ, ಅವರು ಇರುವೆಗಳಿಂದ ಪಾಠ ಕಲಿಯಲಿ.

ಇಂಗ್ಲೀಷ್ ಮೂಲ: ಲಲಿತ

ಕನ್ನಡಕ್ಕೆ: ಪೃಥ್ವಿ ಕಣಸೋಗಿ

ಆಹಾರ ಭದ್ರತೆಯ ಖಾತ್ರಿಗಾಗಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...