Homeಮುಖಪುಟಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

- Advertisement -
- Advertisement -

ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಮತ್ತು ಸ್ತ್ರೀದ್ವೇಷದ ಕುರಿತು ಹೇಮಾ ಸಮಿತಿ ನೀಡಿದ ವರದಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಕೈಬಿಡಲು ಕೇರಳ ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಸಂತ್ರಸ್ತರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ಆದ್ದರಿಂದ 35 ಕ್ರಿಮಿನಲ್ ಪ್ರಕರಣಗಳಲ್ಲಿ ‘ಫರ್ದರ್ ಆಕ್ಷನ್ ಡ್ರಾಪ್ಡ್’ (ಎಫ್‌ಎಡಿ) ವರದಿಗಳನ್ನು ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಧಿಕೃತ ಮೂಲಗಳ ಪ್ರಕಾರ, ಎಸ್‌ಐಟಿ ಮತ್ತು ನ್ಯಾಯಾಲಯ ಪದೇ ಪದೇ ಸಮನ್ಸ್ ಜಾರಿ ಮಾಡಿದರೂ, ಸಂತ್ರಸ್ತರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡಲು ನಿರಾಕರಿಸಿದ್ದಾರೆ ಎಂದು ವರದಿ ಹೇಳಿದೆ.

ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಕಾರಣ 21 ಪ್ರಕರಣಗಳಲ್ಲಿ ಎಫ್‌ಎಡಿ ವರದಿಗಳನ್ನು ಸಲ್ಲಿಸಲಾಗಿದೆ. ಉಳಿದ 14 ಪ್ರಕರಣಗಳನ್ನು ಕೂಡ ತಾತ್ಕಾಲಿಕವಾಗಿ ಕೈಬಿಡುವ ಸಾಧ್ಯತೆಯಿದೆ ಎಂದು ತನಿಖೆಯ ನೋಡಲ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಜಿ. ಪೂಂಗುಝಿಲಿ ತಿಳಿಸಿದ್ದಾರೆ.

“ಶಾಶ್ವತವಾಗಿ ಪ್ರಕರಣಗಳನ್ನು ಕೈಬಿಟ್ಟಿಲ್ಲ”

“ಕಾನೂನು ಹಾಗೂ ಕಾರ್ಯವಿಧಾನಗಳ ಭಾಗವಾಗಿ ಸದ್ಯಕ್ಕೆ ಪ್ರಕರಣಗಳಲ್ಲಿ ತನಿಖೆಯನ್ನು ಅಂತ್ಯಗೊಳಿಸಲಾಗುತ್ತಿದೆ. ಆದರೆ, ಯಾವುದೇ ಪ್ರಕರಣಗಳನ್ನು ಶಾಶ್ವತವಾಗಿ ಕೈಬಿಡುವುದಿಲ್ಲ. ಸಂತ್ರಸ್ತರು ಯಾವುದೇ ಹಂತದಲ್ಲೂ ಮುಂದೆ ಬಂದು ಹೇಳಿಕೆ ದಾಖಲಿಸಲು ಅವಕಾಶವಿದೆ. ಹಾಗೇನಾದರು ಆದರೆ, ತನಿಖೆ ಮುಂದುವರಿಯಲಿದೆ” ಎಂದು ಪೂಂಗುಝಿಲಿ ಸ್ಪಷ್ಟಪಡಿಸಿದ್ದಾಗಿ ವರದಿ ಹೇಳಿದೆ.

ಎಸ್‌ಐಟಿ ಸಂತ್ರಸ್ತರಿಗೆ ಮೂರು ಸುತ್ತಿನ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯ ಕೂಡ ಮೂರು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ, ಸಂತ್ರಸ್ತರಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ. ಇಂತಹ ಸ್ಥಿತಿಯಲ್ಲಿ ಮುಂದಿನ ತನಿಖೆ ಅಸಾಧ್ಯವಾಗಿದೆ ಎಂದು ಪೂಂಗುಝಿಲಿ ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಹೇಮಾ ಸಮಿತಿ ವರದಿ ಮತ್ತು ಸಂತ್ರಸ್ತರ ಆರೋಪಗಳನ್ನು ಆಧರಿಸಿ ದಾಖಲಾಗಿರುವ ಸುಮಾರು 70 ಇತರ ಪ್ರಕರಣಗಳ ಪೊಲೀಸ್ ತನಿಖೆಗಳು ಮುಂದುವರೆದಿವೆ. ಇವುಗಳಲ್ಲಿ, ಸುಮಾರು 25 ಪ್ರಕರಣಗಳಲ್ಲಿ ಈಗಾಗಲೇ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ.

ಗಮನಾರ್ಹವಾಗಿ, ಈಗಾಗಲೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶಾಸಕ ಎಂ. ಮುಖೇಶ್, ಸಿದ್ದಿಕ್, ಜಯಸೂರ್ಯ, ಎಡವೇಲ ಬಾಬು, ಮಣಿಯನ್‌ಪಿಳ್ಳೈ ರಾಜು ಮತ್ತು ರಂಜಿತ್ ಸೇರಿದಂತೆ ಮಲಯಾಳಂ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳ ಹೆಸರಿದೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಅನುಭವಿಸುತ್ತಿರುವ ಲೈಂಗಿಕ ಮತ್ತು ಇತರ ಶೋಷಣೆಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಜುಲೈ 2017 ರಲ್ಲಿ ಹೇಮಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಸಮಿತಿ 31 ಡಿಸೆಂಬರ್ 2019ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಮಾರು ಐದು ವರ್ಷಗಳ ಬಳಿಕ,19 ಆಗಸ್ಟ್ 2024ರಂದು ಬಹಿರಂಗಗೊಳಿಸಲಾಗಿದೆ.

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...