Homeಮುಖಪುಟಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹುದ್ದೆಗೆ  ಹೇಮಂತ್ ಸೊರೆನ್ ರಾಜೀನಾಮೆ ಬೆನ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಂಚಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದಾರೆ.

ಜಾರ್ಖಾಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಹೇಮಂತ್ ಸೊರೆನ್ ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಈ ಬಂಧನ ನಡೆದಿದೆ. ಆಡಳಿತಾರೂಢ ಮೈತ್ರಿಕೂಟವು ಹೇಳಿದಂತೆ ಹೇಮಂತ್ ಸೊರೆನ್ ಅವರ ಆಪ್ತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ಈಗಾಗಲೇ ಬೆಂಬಲಿಗ ಶಾಸಕರೊಂದಿಗೆ ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನಕ್ಕೆ ಅನುಮತಿ ಕೇಳಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಹಿಂದೆ ಹೇಮಂತ್ ಸೊರೆನ್ ಅವರನ್ನು ಮೂರು ಬಾರಿ ಅವರನ್ನು ವಿಚಾರಣೆ ಮಾಡಲಾಗಿತ್ತು. ಮೊದಲ ನವೆಂಬರ್ 2021ರಲ್ಲಿ EDಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಜನವರಿ 20 ಮತ್ತು 31ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಸಮನ್ಸ್ ರಾಂಚಿಯಲ್ಲಿ ಭೂಮಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.

ಸೊರೇನ್ ಅವರ ದೆಹಲಿಯ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಹೋಗಿದ್ದರು. ಈ ವೇಳೆ ನಾಟಕೀಯ ಬೆಳವಣಿಗೆ ನಡೆದಿತ್ತು. ಸೊರೇನ್ ಅವರು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ಇಡಿ ಅಧಿಕಾರಿಗಳು 36 ಲಕ್ಷ ನಗದು ಹಾಗೂ 1 ಕೋಟಿಗೂ ಹೆಚ್ಚು ಬೆಲೆ ಬಾಳುವ ಬಿಎಂಡಬ್ಲ್ಯು ಎಕ್ಸ್‌7 ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸೊರೇನ್ ಅವರು ರಾಂಚಿಯಲ್ಲಿ ಕಾಣಿಸಿಕೊಂಡಿದ್ದರು. ಬುಧವಾರ ಸಲ್ಲಿಸಿದ ದೂರಿನಲ್ಲಿ ಬಿಎಂಡಬ್ಲ್ಯು ಕಾರಿನ ಮಾಲೀಕ ನಾನಲ್ಲ. ನಾನು ಯಾವುದೇ ಅಕ್ರಮ ಹಣವನ್ನು ಹೊಂದಿಲ್ಲ ಎಂದು ಹೇಮಂತ್ ಸೊರೇನ್ ಹೇಳಿದ್ದರು.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಪ್ರಶ್ನೆಗೆ ಚರ್ಚೆ ನಡೆಸಿದರು. ಅವರ ಪತ್ನಿ ಕಲ್ಪನಾ ಸೊರೆನ್ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ಈ ಆಲೋಚನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಭೂ ಹಗರಣ ಪ್ರಕರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ದೊಡ್ಡ ದಂಧೆಯನ್ನು ಒಳಗೊಂಡಿದೆ ಇಡಿ ಆರೋಪಿಸಿದೆ. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇದುವರೆಗೆ ಬಂಧಿಸಲಾಗಿದೆ.

ಇದನ್ನು ಓದಿ: ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...