Homeಮುಖಪುಟ24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ 24 ಗಂಟೆಗಳಿಂದ ಸೊರೇನ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅವರ ಪಕ್ಷದ ಮೂಲಗಳು ‘ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದೆ.

ಇಡಿ ಮೂಲಗಳ ಪ್ರಕಾರ, ಸೊರೇನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಹಲವಾರು ಸಿಬ್ಬಂದಿಗಳ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೆಲವು ದಾಖಲೆಗಳು ಮತ್ತು ₹36 ಲಕ್ಷ ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸೊರೇನ್ ಅವರು ಪತ್ತೆಯಾಗಲಿಲ್ಲ. ಅವರು ಭಾನುವಾರ ತಡರಾತ್ರಿ ದೆಹಲಿಯ ನಿವಾಸವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ಬಿಜೆಪಿ ಘಟಕವು ‘ಮುಖ್ಯಮಂತ್ರಿ ಪರಾರಿಯಾಗಿದ್ದಾರೆ’ ಎಂದು ಹೇಳಿಕೊಂಡಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು’ ಎಂದು ಒತ್ತಾಯಿಸಿದೆ. ‘ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ’ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು, ‘ಸೋರೆನ್ ತಮ್ಮ ದೆಹಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋದರು’ ಎಂದು ಆರೋಪಿಸಿದ್ದಾರೆ.

ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ. ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಜೆಎಂಎಂ ಕೂಡ ಜಾರ್ಖಂಡ್‌ನಾದ್ಯಂತ ಸೊರೇನ್ ಅವರ ಬೆಂಬಲಿಸಿ ರ್ಯಾಲಿಗಳನ್ನು ನಡೆಸಿದೆ.

‘ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದು, ಶೀಘ್ರದಲ್ಲೆ ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ’ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು, ಸೋರೆನ್ ಅವರು ಇರುವ ಸ್ಥಳದ ಕುರಿತು ಸೃಷ್ಟಿಸಲಾದ ಗೊಂದಲವು ಪಿತೂರಿಯ ಭಾಗವಾಗಿದೆ. ಎಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ’ ಎಂದು ಹೇಳಿದರು.

ಮಂಗಳವಾರದ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‌ನಲ್ಲೆ ಉಳಿಯುವಂತೆ ಸೂಚಿಸಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಮತ್ತು ಜಾರ್ಖಂಡ್ ನಾಯಕ ನಿಶಿಕಾಂತ್ ದುಬೆ ಅವರು ಸೋರೆನ್ ಅವರ ಪತ್ನಿ ಕಲ್ಪನಾ ಅವರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಭೂ ಮಾಫಿಯಾದಿಂದ ಅಕ್ರಮವಾಗಿ ಮಾಲೀಕತ್ವ ಬದಲಾಯಿಸಿದ ಆರೋಪದ ದಂಧೆಗೆ ಸಂಬಂಧಿಸಿದಂತೆ ಸೊರೇನ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಡಿ ಇದುವರೆಗೆ 14 ಮಂದಿಯನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಜನವರಿ 20 ರಂದು ಸೊರೇನ್ ಅವರ ಹೇಳಿಕೆ ದಾಖಲಿಸಿತ್ತು. ಹೇಳಿಕೆಯೊಂದರಲ್ಲಿ, ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿದ ದಿನಗಳ ನಂತರ ಏಕೆ ಹೊಸ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಜೆಎಂಎಂ ಪ್ರಶ್ನಿಸಿದೆ. ಅವರು ಬುಧವಾರ ವಿಚಾರಣೆಗೆ ಲಭ್ಯವಾಗುತ್ತಾರೆ ಎಂದು ಹೇಳಿದ ನಂತರವೂ ನಿನ್ನೆ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರ ದೆಹಲಿ ನಿವಾಸವನ್ನು ತಲುಪಿದ್ದಾರೆ ಎಂದು ಪಕ್ಷ ಆರೋಪಿಸಿದೆ.

‘ಮುಖ್ಯಮಂತ್ರಿ ಅಲ್ಲದೆ, ಇದು ರಾಜ್ಯದ 3.5 ಕೋಟಿ ಜನರಿಗೆ ಮಾಡಿದ ಅವಮಾನವಲ್ಲವೇ? ಇಡಿ ಯಂತಹ ಸಂಸ್ಥೆಗಳು ಈಗ ಬಿಜೆಪಿಯ ಕೈಗೊಂಬೆಗಳಾಗಿವೆಯೇ? ರಾಜ್ಯ ಸರ್ಕಾರಗಳನ್ನು ರಚಿಸಲು ಅಥವಾ ಉರುಳಿಸಲು ಅವುಗಳನ್ನು ಬಳಸಬಹುದೇ’ ಎಂದು ಜೆಎಂಎಂ ಪ್ರಶ್ನಿಸಿದೆ.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...