Homeಮುಖಪುಟ24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ 24 ಗಂಟೆಗಳಿಂದ ಸೊರೇನ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅವರ ಪಕ್ಷದ ಮೂಲಗಳು ‘ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದೆ.

ಇಡಿ ಮೂಲಗಳ ಪ್ರಕಾರ, ಸೊರೇನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಹಲವಾರು ಸಿಬ್ಬಂದಿಗಳ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೆಲವು ದಾಖಲೆಗಳು ಮತ್ತು ₹36 ಲಕ್ಷ ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸೊರೇನ್ ಅವರು ಪತ್ತೆಯಾಗಲಿಲ್ಲ. ಅವರು ಭಾನುವಾರ ತಡರಾತ್ರಿ ದೆಹಲಿಯ ನಿವಾಸವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ಬಿಜೆಪಿ ಘಟಕವು ‘ಮುಖ್ಯಮಂತ್ರಿ ಪರಾರಿಯಾಗಿದ್ದಾರೆ’ ಎಂದು ಹೇಳಿಕೊಂಡಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು’ ಎಂದು ಒತ್ತಾಯಿಸಿದೆ. ‘ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ’ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು, ‘ಸೋರೆನ್ ತಮ್ಮ ದೆಹಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋದರು’ ಎಂದು ಆರೋಪಿಸಿದ್ದಾರೆ.

ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ. ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಜೆಎಂಎಂ ಕೂಡ ಜಾರ್ಖಂಡ್‌ನಾದ್ಯಂತ ಸೊರೇನ್ ಅವರ ಬೆಂಬಲಿಸಿ ರ್ಯಾಲಿಗಳನ್ನು ನಡೆಸಿದೆ.

‘ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದು, ಶೀಘ್ರದಲ್ಲೆ ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ’ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು, ಸೋರೆನ್ ಅವರು ಇರುವ ಸ್ಥಳದ ಕುರಿತು ಸೃಷ್ಟಿಸಲಾದ ಗೊಂದಲವು ಪಿತೂರಿಯ ಭಾಗವಾಗಿದೆ. ಎಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ’ ಎಂದು ಹೇಳಿದರು.

ಮಂಗಳವಾರದ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‌ನಲ್ಲೆ ಉಳಿಯುವಂತೆ ಸೂಚಿಸಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಮತ್ತು ಜಾರ್ಖಂಡ್ ನಾಯಕ ನಿಶಿಕಾಂತ್ ದುಬೆ ಅವರು ಸೋರೆನ್ ಅವರ ಪತ್ನಿ ಕಲ್ಪನಾ ಅವರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಭೂ ಮಾಫಿಯಾದಿಂದ ಅಕ್ರಮವಾಗಿ ಮಾಲೀಕತ್ವ ಬದಲಾಯಿಸಿದ ಆರೋಪದ ದಂಧೆಗೆ ಸಂಬಂಧಿಸಿದಂತೆ ಸೊರೇನ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಡಿ ಇದುವರೆಗೆ 14 ಮಂದಿಯನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಜನವರಿ 20 ರಂದು ಸೊರೇನ್ ಅವರ ಹೇಳಿಕೆ ದಾಖಲಿಸಿತ್ತು. ಹೇಳಿಕೆಯೊಂದರಲ್ಲಿ, ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿದ ದಿನಗಳ ನಂತರ ಏಕೆ ಹೊಸ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಜೆಎಂಎಂ ಪ್ರಶ್ನಿಸಿದೆ. ಅವರು ಬುಧವಾರ ವಿಚಾರಣೆಗೆ ಲಭ್ಯವಾಗುತ್ತಾರೆ ಎಂದು ಹೇಳಿದ ನಂತರವೂ ನಿನ್ನೆ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರ ದೆಹಲಿ ನಿವಾಸವನ್ನು ತಲುಪಿದ್ದಾರೆ ಎಂದು ಪಕ್ಷ ಆರೋಪಿಸಿದೆ.

‘ಮುಖ್ಯಮಂತ್ರಿ ಅಲ್ಲದೆ, ಇದು ರಾಜ್ಯದ 3.5 ಕೋಟಿ ಜನರಿಗೆ ಮಾಡಿದ ಅವಮಾನವಲ್ಲವೇ? ಇಡಿ ಯಂತಹ ಸಂಸ್ಥೆಗಳು ಈಗ ಬಿಜೆಪಿಯ ಕೈಗೊಂಬೆಗಳಾಗಿವೆಯೇ? ರಾಜ್ಯ ಸರ್ಕಾರಗಳನ್ನು ರಚಿಸಲು ಅಥವಾ ಉರುಳಿಸಲು ಅವುಗಳನ್ನು ಬಳಸಬಹುದೇ’ ಎಂದು ಜೆಎಂಎಂ ಪ್ರಶ್ನಿಸಿದೆ.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...