Homeಮುಖಪುಟ24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ 24 ಗಂಟೆಗಳಿಂದ ಸೊರೇನ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅವರ ಪಕ್ಷದ ಮೂಲಗಳು ‘ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದೆ.

ಇಡಿ ಮೂಲಗಳ ಪ್ರಕಾರ, ಸೊರೇನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಹಲವಾರು ಸಿಬ್ಬಂದಿಗಳ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೆಲವು ದಾಖಲೆಗಳು ಮತ್ತು ₹36 ಲಕ್ಷ ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸೊರೇನ್ ಅವರು ಪತ್ತೆಯಾಗಲಿಲ್ಲ. ಅವರು ಭಾನುವಾರ ತಡರಾತ್ರಿ ದೆಹಲಿಯ ನಿವಾಸವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ಬಿಜೆಪಿ ಘಟಕವು ‘ಮುಖ್ಯಮಂತ್ರಿ ಪರಾರಿಯಾಗಿದ್ದಾರೆ’ ಎಂದು ಹೇಳಿಕೊಂಡಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು’ ಎಂದು ಒತ್ತಾಯಿಸಿದೆ. ‘ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ’ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು, ‘ಸೋರೆನ್ ತಮ್ಮ ದೆಹಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋದರು’ ಎಂದು ಆರೋಪಿಸಿದ್ದಾರೆ.

ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ. ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಜೆಎಂಎಂ ಕೂಡ ಜಾರ್ಖಂಡ್‌ನಾದ್ಯಂತ ಸೊರೇನ್ ಅವರ ಬೆಂಬಲಿಸಿ ರ್ಯಾಲಿಗಳನ್ನು ನಡೆಸಿದೆ.

‘ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದು, ಶೀಘ್ರದಲ್ಲೆ ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ’ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು, ಸೋರೆನ್ ಅವರು ಇರುವ ಸ್ಥಳದ ಕುರಿತು ಸೃಷ್ಟಿಸಲಾದ ಗೊಂದಲವು ಪಿತೂರಿಯ ಭಾಗವಾಗಿದೆ. ಎಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ’ ಎಂದು ಹೇಳಿದರು.

ಮಂಗಳವಾರದ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‌ನಲ್ಲೆ ಉಳಿಯುವಂತೆ ಸೂಚಿಸಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಮತ್ತು ಜಾರ್ಖಂಡ್ ನಾಯಕ ನಿಶಿಕಾಂತ್ ದುಬೆ ಅವರು ಸೋರೆನ್ ಅವರ ಪತ್ನಿ ಕಲ್ಪನಾ ಅವರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಭೂ ಮಾಫಿಯಾದಿಂದ ಅಕ್ರಮವಾಗಿ ಮಾಲೀಕತ್ವ ಬದಲಾಯಿಸಿದ ಆರೋಪದ ದಂಧೆಗೆ ಸಂಬಂಧಿಸಿದಂತೆ ಸೊರೇನ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಡಿ ಇದುವರೆಗೆ 14 ಮಂದಿಯನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಜನವರಿ 20 ರಂದು ಸೊರೇನ್ ಅವರ ಹೇಳಿಕೆ ದಾಖಲಿಸಿತ್ತು. ಹೇಳಿಕೆಯೊಂದರಲ್ಲಿ, ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿದ ದಿನಗಳ ನಂತರ ಏಕೆ ಹೊಸ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಜೆಎಂಎಂ ಪ್ರಶ್ನಿಸಿದೆ. ಅವರು ಬುಧವಾರ ವಿಚಾರಣೆಗೆ ಲಭ್ಯವಾಗುತ್ತಾರೆ ಎಂದು ಹೇಳಿದ ನಂತರವೂ ನಿನ್ನೆ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರ ದೆಹಲಿ ನಿವಾಸವನ್ನು ತಲುಪಿದ್ದಾರೆ ಎಂದು ಪಕ್ಷ ಆರೋಪಿಸಿದೆ.

‘ಮುಖ್ಯಮಂತ್ರಿ ಅಲ್ಲದೆ, ಇದು ರಾಜ್ಯದ 3.5 ಕೋಟಿ ಜನರಿಗೆ ಮಾಡಿದ ಅವಮಾನವಲ್ಲವೇ? ಇಡಿ ಯಂತಹ ಸಂಸ್ಥೆಗಳು ಈಗ ಬಿಜೆಪಿಯ ಕೈಗೊಂಬೆಗಳಾಗಿವೆಯೇ? ರಾಜ್ಯ ಸರ್ಕಾರಗಳನ್ನು ರಚಿಸಲು ಅಥವಾ ಉರುಳಿಸಲು ಅವುಗಳನ್ನು ಬಳಸಬಹುದೇ’ ಎಂದು ಜೆಎಂಎಂ ಪ್ರಶ್ನಿಸಿದೆ.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...