Homeಮುಖಪುಟ24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

24 ಗಂಟೆಗಳಿಂದ ಹೇಮಂತ್ ಸೊರೇನ್ ನಾಪತ್ತೆ; ಜಾರ್ಖಂಡ್ ಸಿಎಂಗಾಗಿ ಇಡಿ ಹುಡುಕಾಟ?

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ 24 ಗಂಟೆಗಳಿಂದ ಸೊರೇನ್ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅವರ ಪಕ್ಷದ ಮೂಲಗಳು ‘ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದೆ.

ಇಡಿ ಮೂಲಗಳ ಪ್ರಕಾರ, ಸೊರೇನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಹಲವಾರು ಸಿಬ್ಬಂದಿಗಳ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೆಲವು ದಾಖಲೆಗಳು ಮತ್ತು ₹36 ಲಕ್ಷ ಮೌಲ್ಯದ ನಗದು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರು. ಆದರೆ, ಸೊರೇನ್ ಅವರು ಪತ್ತೆಯಾಗಲಿಲ್ಲ. ಅವರು ಭಾನುವಾರ ತಡರಾತ್ರಿ ದೆಹಲಿಯ ನಿವಾಸವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ಬಿಜೆಪಿ ಘಟಕವು ‘ಮುಖ್ಯಮಂತ್ರಿ ಪರಾರಿಯಾಗಿದ್ದಾರೆ’ ಎಂದು ಹೇಳಿಕೊಂಡಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು’ ಎಂದು ಒತ್ತಾಯಿಸಿದೆ. ‘ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ’ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು, ‘ಸೋರೆನ್ ತಮ್ಮ ದೆಹಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋದರು’ ಎಂದು ಆರೋಪಿಸಿದ್ದಾರೆ.

ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ. ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಜೆಎಂಎಂ ಕೂಡ ಜಾರ್ಖಂಡ್‌ನಾದ್ಯಂತ ಸೊರೇನ್ ಅವರ ಬೆಂಬಲಿಸಿ ರ್ಯಾಲಿಗಳನ್ನು ನಡೆಸಿದೆ.

‘ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದು, ಶೀಘ್ರದಲ್ಲೆ ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ’ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು, ಸೋರೆನ್ ಅವರು ಇರುವ ಸ್ಥಳದ ಕುರಿತು ಸೃಷ್ಟಿಸಲಾದ ಗೊಂದಲವು ಪಿತೂರಿಯ ಭಾಗವಾಗಿದೆ. ಎಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ’ ಎಂದು ಹೇಳಿದರು.

ಮಂಗಳವಾರದ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‌ನಲ್ಲೆ ಉಳಿಯುವಂತೆ ಸೂಚಿಸಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಮತ್ತು ಜಾರ್ಖಂಡ್ ನಾಯಕ ನಿಶಿಕಾಂತ್ ದುಬೆ ಅವರು ಸೋರೆನ್ ಅವರ ಪತ್ನಿ ಕಲ್ಪನಾ ಅವರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಭೂ ಮಾಫಿಯಾದಿಂದ ಅಕ್ರಮವಾಗಿ ಮಾಲೀಕತ್ವ ಬದಲಾಯಿಸಿದ ಆರೋಪದ ದಂಧೆಗೆ ಸಂಬಂಧಿಸಿದಂತೆ ಸೊರೇನ್ ಅವರನ್ನು ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಡಿ ಇದುವರೆಗೆ 14 ಮಂದಿಯನ್ನು ಬಂಧಿಸಿದೆ.

ತನಿಖಾ ಸಂಸ್ಥೆಯು ಜನವರಿ 20 ರಂದು ಸೊರೇನ್ ಅವರ ಹೇಳಿಕೆ ದಾಖಲಿಸಿತ್ತು. ಹೇಳಿಕೆಯೊಂದರಲ್ಲಿ, ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿದ ದಿನಗಳ ನಂತರ ಏಕೆ ಹೊಸ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಜೆಎಂಎಂ ಪ್ರಶ್ನಿಸಿದೆ. ಅವರು ಬುಧವಾರ ವಿಚಾರಣೆಗೆ ಲಭ್ಯವಾಗುತ್ತಾರೆ ಎಂದು ಹೇಳಿದ ನಂತರವೂ ನಿನ್ನೆ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಯವರ ದೆಹಲಿ ನಿವಾಸವನ್ನು ತಲುಪಿದ್ದಾರೆ ಎಂದು ಪಕ್ಷ ಆರೋಪಿಸಿದೆ.

‘ಮುಖ್ಯಮಂತ್ರಿ ಅಲ್ಲದೆ, ಇದು ರಾಜ್ಯದ 3.5 ಕೋಟಿ ಜನರಿಗೆ ಮಾಡಿದ ಅವಮಾನವಲ್ಲವೇ? ಇಡಿ ಯಂತಹ ಸಂಸ್ಥೆಗಳು ಈಗ ಬಿಜೆಪಿಯ ಕೈಗೊಂಬೆಗಳಾಗಿವೆಯೇ? ರಾಜ್ಯ ಸರ್ಕಾರಗಳನ್ನು ರಚಿಸಲು ಅಥವಾ ಉರುಳಿಸಲು ಅವುಗಳನ್ನು ಬಳಸಬಹುದೇ’ ಎಂದು ಜೆಎಂಎಂ ಪ್ರಶ್ನಿಸಿದೆ.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...