Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...