Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...