Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...