Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...