Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....