Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...