Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...