Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...