Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...