Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

- Advertisement -
- Advertisement -

ನಿವೃತ್ತ ಮುಖ್ಯ ಶಿಕ್ಷಕರು, ಸಮಾನ ಶಿಕ್ಷಣ, ಸುಸ್ಥಿರ ಪರಿಸರಕ್ಕಾಗಿ ಕಾರ್ಯಕರ್ತ, ಹೋರಾಟಗಾರರಾದ ರಾಮಕೃಷ್ಣಪ್ಪನವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ನಿರಾಕರಿಸಿದ್ದಾರೆ…ಯಾಕೆ? ಇಲ್ಲಿ ಓದಿ.

ರಾಜ್ಯೋತ್ಸವ ಪ್ರಶಸ್ತಿ ಬೇಡ……!!?

ನಾನು ಈ ದೇಶದ ನಾಗರೀಕ. ಜನ ವಿಜ್ಞಾನ ಚಳುವಳಿಯ ಸಾಮಾನ್ಯ ಕಾರ್ಯಕರ್ತ. ನನಗೆ 2019 – 2020 ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ Biodata ಕಳುಹಿಸುವಂತೆ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ online ಪತ್ರ ಬಂದಿದೆ. ಆತ್ಮೀಯ ಗೆಳೆಯ ಕೆಂಕೆರೆ ಮಲ್ಲಿಕಾರ್ಜುನ್ ಮತ್ತು ಸಂಘಟನೆಯ ಸಂಗಾತಿ ಎನ್ ಇಂದಿರಮ್ಮ ವಿವರ ಕಳುಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಶಿಷ್ಯ ಮತ್ತು ಶಿರಡಿ ಸಾಯಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿಠಲ್ ಭೀಮಯ್ಯ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರನ್ನು ಶಿಫಾರಸು ಮಾಡುವಂತೆ ಫೇಸ್‌ಬುಕ್‌ನಲ್ಲಿ ಕಾನೂನು ಸಚಿವವರಿಗೆ ಮನವಿ ಮಾಡಿದ್ದಾರೆ. ನನ್ನ ಬಗ್ಗೆ ಅಭಿಮಾನವಿಟ್ಟಿರುವ ಆತ್ಮೀಯ ಗೆಳೆಯರು ಮತ್ತು ಅಧಿಕಾರಿಗಳಿಗೆ ನಾನು ಆಬಾರಿ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ರಾಜ್ಯೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಬೇಕೇ? ಈಗಿನ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ನಾನೇ ಪ್ರಶ್ನಿಸಿಕೊಂಡೆ?

  1. ಕೃಷಿ ಮತ್ತು ರೈತ ಸಮುದಾಯಕ್ಕೆ ಮಾರಕವಾಗಬಹುದಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೊಂಡಿರುವಾಗ ರೈತನಾದ ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದರೆ ನನ್ನ ಒಡನಾಡಿ ಅನ್ನದಾತರಿಗೆ ಮಾಡುವ ವಂಚನೆಯಾಗುವುದಿಲ್ಲವೇ?
  2. ಶಿಕ್ಷಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅನಾಥವಾಗಿರುವ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪ್ರಯತ್ನಗಳಿಲ್ಲದೆ ಅವುಗಳನ್ನು ಮುಚ್ಚಲು ತಯಾರಿ ನಡೆದಿರುವ ಸಂದರ್ಭದಲ್ಲಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಕಾರ್ಯಕರ್ತನಾದ ನಾನು ಪ್ರಶಸ್ತಿ ಪಡೆಯುವುದು ಕುಗ್ರಾಮಗಳ ಮತ್ತು ಆರ್ಥಿಕ ಅಶಕ್ತರ ಮಕ್ಕಳ ಶಿಕ್ಷಣವನ್ನು ನಿರಾಕರಿಸಲು ಕೈಜೋಡಿಸಿದಂತಲ್ಲವೇ!!
  3. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮತ್ವ ಕುಸಿಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ಮಾಧ್ಯಮ ವಿಜೃಂಭಿಸುತ್ತಿದೆ. ಹಿಂದಿ ಹೇರಿಕೆಯಾಗುತ್ತಿದೆ. ಇಂತಹ ಕನ್ನಡ ಅನಾಥವಾಗಿರುವ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ “ಕನ್ನಡ” ರಾಜ್ಯೋತ್ಸವ ಪ್ರಶಸ್ತಿ ಕೇಳುವುದು ಕನ್ನಡಮ್ಮನಿಗೆ ಎಸಗುವ ದ್ರೋಹ ಅಲ್ಲವೇ?
  4. ಭೂಮಂಡಲದಲ್ಲಿ ಪಾರಿಸಾರಿಕ ಮಹತ್ವ ಪಡೆದಿರುವ ಪಶ್ಚಿಮ ಘಟ್ಟಗಳು ದಾಳಿಗೊಳಗಾಗಿವೆ, ನೈಸರ್ಗಿಕ ಸಂಪನ್ಮೂಲಗಳು(ನೀರು,ಖನಿಜ, ಕಲ್ಲು, ಮರಳು.. ) ಲೂಟಿಯಾಗುತ್ತಿರುವ ಸಮಯದಲ್ಲಿ, ಗಾಡ್ಗೀಳ್‌‌ರವರ ಜೊತೆ ಜೀವ ವೈವಿಧ್ಯ ದಾಖಲಾತಿ ಮಾಡಿರುವ ಮತ್ತು ಅರಣ್ಯ ಬೆಳೆಸುವ ಪ್ರಯತ್ನದಲ್ಲಿರುವ ನಾನು ಪ್ರಶಸ್ತಿಗೆ ಅಹವಾಲು ಸಲ್ಲಿಸುವುದು ಪರಿಸರ ವಿನಾಶಕ್ಕೆ ಕುಮ್ಮಕ್ಕು ಕೊಟ್ಟಂತಲ್ಲವೇ!?
  5. ಪರಿಹಾರ ಸಿಗದ ನೆರೆ ಸಂತ್ರಸ್ತರು ಮತ್ತು ಅರಣ್ಯವನ್ನೇ ನಂಬಿ ಸಾವಿರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮುಗ್ಧ ಅರಣ್ಯ ವಾಸಿಗಳು ಕಾಡಿನಿಂದ ಹೊರದಬ್ಬಲ್ಪಟ್ಟು ಬೆತ್ತಲೆಯಾಗಿ ಬೀದಿಯಲ್ಲಿ ಬಿದ್ದಿರುವಾಗ ಪ್ರಶಸ್ತಿ ಸಂದರ್ಭದಲ್ಲಿ ಹೊದ್ದಿಸುವ ಶಾಲು ನನ್ನನ್ನು ಅಣಕಿಸುವುದಿಲ್ಲವೇ??
  6. ಕೊರೊನಾ ತಂದಿತ್ತ ಸಂಕಷ್ಟದಿಂದ ಪಾರಾಗಲು ನೂರಾರು ಕಿ. ಮೀ. ಲಗೇಜು, ಕುಟುಂಬ ಸಮೇತ ಊರುಗಳಿಗೆ ಮರಳಿದ, ಇನ್ನೂ ಅತಂತ್ರರಾಗಿರುವ ಈ ದೇಶಕ್ಕಾಗಿ ದುಡಿದ ವಲಸೆ ಕಾರ್ಮಿಕರ ಮಕ್ಕಳು ಹಿಡಿ ಅನ್ನಕ್ಕಾಗಿ ಕೈಚಾಚಿದಂತೆ ಗೋಚರಿಸುವುದಿಲ್ಲವೇ ಪ್ರಶಸ್ತಿ ಫಲಕ!!!!
  7. ದಶಕಗಳಿಂದ ಉತ್ತಿ ಬಿತ್ತಿ ಜೀವ ಸವೆಸಿರುವ ಭೂಹೀನರಿಗೆ ನೀಡಬೇಕಿರುವ ಸಾಗುವಳಿ ಪತ್ರ ಮತ್ತು ವಸತಿ ರಹಿರಿಗೆ ಕೊಡಬೇಕಿರುವ ಹಕ್ಕು “ಪತ್ರ ಪ್ರಶಸ್ತಿ” ಪತ್ರಕ್ಕಿಂತ ಹೆಚ್ಚು ಮೌಲ್ಯಯುತವಾದುದಲ್ಲವೇ??
  8. ಗಾಂಧಿ ಪ್ರತಿಪಾದಿಸಿದ ಮೌಲ್ಯ ಗಳು ಹಿನ್ನಲೆಗೆ ಸರಿದು ಗೂಡ್ಸೆ ಸಂಸ್ಕೃತಿ ಮುನ್ನೆಲೆಗೆ ಬರುತ್ತಿರುವ ಕಾಲಘಟ್ಟದಲ್ಲಿ Gandhian collective India ದ ಸತ್ಯಾಗ್ರಹಿಯಾದ ನಾನು ಪ್ರಶಸ್ತಿ ಬಯಸುವುದು ಗಾಂಧಿ ಮತ್ತು ಇತಿಹಾಸಕ್ಕೆ ಅಪಚಾರ ಎಸಗಿದಂತಲ್ಲವೇ??
  9. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯ, ಕೋಮು ಗಲಭೆ, ವೈಚಾರಿಕ ಚಿಂತಕರ ಬಂಧನ ಮುಂತಾದವುಗಳು ತಗ್ಗಿಲ್ಲ, ಗೌರಿ, ಕಲ್ಬುರ್ಗಿಯಂತಹ ವಿಚಾರವಾದಿಗಳನ್ನು ಕಳೆದು ಕೊಂಡಿರುವ ವಿಜ್ಞಾನ ಸಂಘಟನೆಗಳ ಕಾರ್ಯಕರ್ತನಾದ ನಾನು ನನ್ನ ವಿವೇಕ ಮತ್ತು ಆತ್ಮ ಸಾಕ್ಷಿಗೆ ಅನುಗುಣವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವುದಿಲ್ಲ.

ನನ್ನ ಈ ನಿರ್ಧಾರ ಅಹಂಕಾರ, ಮೂರ್ಖತನ, ದಡ್ಡತನ ಮುಂತಾಗಿ ಭಾವಿಸಬಹುದು. ಅದ್ಯಾವುದೂ ಅಲ್ಲ. ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

ನಮಸ್ಕಾರ,
~ರಾಮಕೃಷ್ಣಪ್ಪ

ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...