Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

- Advertisement -
- Advertisement -

ನಿವೃತ್ತ ಮುಖ್ಯ ಶಿಕ್ಷಕರು, ಸಮಾನ ಶಿಕ್ಷಣ, ಸುಸ್ಥಿರ ಪರಿಸರಕ್ಕಾಗಿ ಕಾರ್ಯಕರ್ತ, ಹೋರಾಟಗಾರರಾದ ರಾಮಕೃಷ್ಣಪ್ಪನವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ನಿರಾಕರಿಸಿದ್ದಾರೆ…ಯಾಕೆ? ಇಲ್ಲಿ ಓದಿ.

ರಾಜ್ಯೋತ್ಸವ ಪ್ರಶಸ್ತಿ ಬೇಡ……!!?

ನಾನು ಈ ದೇಶದ ನಾಗರೀಕ. ಜನ ವಿಜ್ಞಾನ ಚಳುವಳಿಯ ಸಾಮಾನ್ಯ ಕಾರ್ಯಕರ್ತ. ನನಗೆ 2019 – 2020 ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ Biodata ಕಳುಹಿಸುವಂತೆ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ online ಪತ್ರ ಬಂದಿದೆ. ಆತ್ಮೀಯ ಗೆಳೆಯ ಕೆಂಕೆರೆ ಮಲ್ಲಿಕಾರ್ಜುನ್ ಮತ್ತು ಸಂಘಟನೆಯ ಸಂಗಾತಿ ಎನ್ ಇಂದಿರಮ್ಮ ವಿವರ ಕಳುಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಶಿಷ್ಯ ಮತ್ತು ಶಿರಡಿ ಸಾಯಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿಠಲ್ ಭೀಮಯ್ಯ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರನ್ನು ಶಿಫಾರಸು ಮಾಡುವಂತೆ ಫೇಸ್‌ಬುಕ್‌ನಲ್ಲಿ ಕಾನೂನು ಸಚಿವವರಿಗೆ ಮನವಿ ಮಾಡಿದ್ದಾರೆ. ನನ್ನ ಬಗ್ಗೆ ಅಭಿಮಾನವಿಟ್ಟಿರುವ ಆತ್ಮೀಯ ಗೆಳೆಯರು ಮತ್ತು ಅಧಿಕಾರಿಗಳಿಗೆ ನಾನು ಆಬಾರಿ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ರಾಜ್ಯೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಬೇಕೇ? ಈಗಿನ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ನಾನೇ ಪ್ರಶ್ನಿಸಿಕೊಂಡೆ?

  1. ಕೃಷಿ ಮತ್ತು ರೈತ ಸಮುದಾಯಕ್ಕೆ ಮಾರಕವಾಗಬಹುದಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೊಂಡಿರುವಾಗ ರೈತನಾದ ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದರೆ ನನ್ನ ಒಡನಾಡಿ ಅನ್ನದಾತರಿಗೆ ಮಾಡುವ ವಂಚನೆಯಾಗುವುದಿಲ್ಲವೇ?
  2. ಶಿಕ್ಷಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅನಾಥವಾಗಿರುವ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪ್ರಯತ್ನಗಳಿಲ್ಲದೆ ಅವುಗಳನ್ನು ಮುಚ್ಚಲು ತಯಾರಿ ನಡೆದಿರುವ ಸಂದರ್ಭದಲ್ಲಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಕಾರ್ಯಕರ್ತನಾದ ನಾನು ಪ್ರಶಸ್ತಿ ಪಡೆಯುವುದು ಕುಗ್ರಾಮಗಳ ಮತ್ತು ಆರ್ಥಿಕ ಅಶಕ್ತರ ಮಕ್ಕಳ ಶಿಕ್ಷಣವನ್ನು ನಿರಾಕರಿಸಲು ಕೈಜೋಡಿಸಿದಂತಲ್ಲವೇ!!
  3. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮತ್ವ ಕುಸಿಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ಮಾಧ್ಯಮ ವಿಜೃಂಭಿಸುತ್ತಿದೆ. ಹಿಂದಿ ಹೇರಿಕೆಯಾಗುತ್ತಿದೆ. ಇಂತಹ ಕನ್ನಡ ಅನಾಥವಾಗಿರುವ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ “ಕನ್ನಡ” ರಾಜ್ಯೋತ್ಸವ ಪ್ರಶಸ್ತಿ ಕೇಳುವುದು ಕನ್ನಡಮ್ಮನಿಗೆ ಎಸಗುವ ದ್ರೋಹ ಅಲ್ಲವೇ?
  4. ಭೂಮಂಡಲದಲ್ಲಿ ಪಾರಿಸಾರಿಕ ಮಹತ್ವ ಪಡೆದಿರುವ ಪಶ್ಚಿಮ ಘಟ್ಟಗಳು ದಾಳಿಗೊಳಗಾಗಿವೆ, ನೈಸರ್ಗಿಕ ಸಂಪನ್ಮೂಲಗಳು(ನೀರು,ಖನಿಜ, ಕಲ್ಲು, ಮರಳು.. ) ಲೂಟಿಯಾಗುತ್ತಿರುವ ಸಮಯದಲ್ಲಿ, ಗಾಡ್ಗೀಳ್‌‌ರವರ ಜೊತೆ ಜೀವ ವೈವಿಧ್ಯ ದಾಖಲಾತಿ ಮಾಡಿರುವ ಮತ್ತು ಅರಣ್ಯ ಬೆಳೆಸುವ ಪ್ರಯತ್ನದಲ್ಲಿರುವ ನಾನು ಪ್ರಶಸ್ತಿಗೆ ಅಹವಾಲು ಸಲ್ಲಿಸುವುದು ಪರಿಸರ ವಿನಾಶಕ್ಕೆ ಕುಮ್ಮಕ್ಕು ಕೊಟ್ಟಂತಲ್ಲವೇ!?
  5. ಪರಿಹಾರ ಸಿಗದ ನೆರೆ ಸಂತ್ರಸ್ತರು ಮತ್ತು ಅರಣ್ಯವನ್ನೇ ನಂಬಿ ಸಾವಿರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮುಗ್ಧ ಅರಣ್ಯ ವಾಸಿಗಳು ಕಾಡಿನಿಂದ ಹೊರದಬ್ಬಲ್ಪಟ್ಟು ಬೆತ್ತಲೆಯಾಗಿ ಬೀದಿಯಲ್ಲಿ ಬಿದ್ದಿರುವಾಗ ಪ್ರಶಸ್ತಿ ಸಂದರ್ಭದಲ್ಲಿ ಹೊದ್ದಿಸುವ ಶಾಲು ನನ್ನನ್ನು ಅಣಕಿಸುವುದಿಲ್ಲವೇ??
  6. ಕೊರೊನಾ ತಂದಿತ್ತ ಸಂಕಷ್ಟದಿಂದ ಪಾರಾಗಲು ನೂರಾರು ಕಿ. ಮೀ. ಲಗೇಜು, ಕುಟುಂಬ ಸಮೇತ ಊರುಗಳಿಗೆ ಮರಳಿದ, ಇನ್ನೂ ಅತಂತ್ರರಾಗಿರುವ ಈ ದೇಶಕ್ಕಾಗಿ ದುಡಿದ ವಲಸೆ ಕಾರ್ಮಿಕರ ಮಕ್ಕಳು ಹಿಡಿ ಅನ್ನಕ್ಕಾಗಿ ಕೈಚಾಚಿದಂತೆ ಗೋಚರಿಸುವುದಿಲ್ಲವೇ ಪ್ರಶಸ್ತಿ ಫಲಕ!!!!
  7. ದಶಕಗಳಿಂದ ಉತ್ತಿ ಬಿತ್ತಿ ಜೀವ ಸವೆಸಿರುವ ಭೂಹೀನರಿಗೆ ನೀಡಬೇಕಿರುವ ಸಾಗುವಳಿ ಪತ್ರ ಮತ್ತು ವಸತಿ ರಹಿರಿಗೆ ಕೊಡಬೇಕಿರುವ ಹಕ್ಕು “ಪತ್ರ ಪ್ರಶಸ್ತಿ” ಪತ್ರಕ್ಕಿಂತ ಹೆಚ್ಚು ಮೌಲ್ಯಯುತವಾದುದಲ್ಲವೇ??
  8. ಗಾಂಧಿ ಪ್ರತಿಪಾದಿಸಿದ ಮೌಲ್ಯ ಗಳು ಹಿನ್ನಲೆಗೆ ಸರಿದು ಗೂಡ್ಸೆ ಸಂಸ್ಕೃತಿ ಮುನ್ನೆಲೆಗೆ ಬರುತ್ತಿರುವ ಕಾಲಘಟ್ಟದಲ್ಲಿ Gandhian collective India ದ ಸತ್ಯಾಗ್ರಹಿಯಾದ ನಾನು ಪ್ರಶಸ್ತಿ ಬಯಸುವುದು ಗಾಂಧಿ ಮತ್ತು ಇತಿಹಾಸಕ್ಕೆ ಅಪಚಾರ ಎಸಗಿದಂತಲ್ಲವೇ??
  9. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯ, ಕೋಮು ಗಲಭೆ, ವೈಚಾರಿಕ ಚಿಂತಕರ ಬಂಧನ ಮುಂತಾದವುಗಳು ತಗ್ಗಿಲ್ಲ, ಗೌರಿ, ಕಲ್ಬುರ್ಗಿಯಂತಹ ವಿಚಾರವಾದಿಗಳನ್ನು ಕಳೆದು ಕೊಂಡಿರುವ ವಿಜ್ಞಾನ ಸಂಘಟನೆಗಳ ಕಾರ್ಯಕರ್ತನಾದ ನಾನು ನನ್ನ ವಿವೇಕ ಮತ್ತು ಆತ್ಮ ಸಾಕ್ಷಿಗೆ ಅನುಗುಣವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವುದಿಲ್ಲ.

ನನ್ನ ಈ ನಿರ್ಧಾರ ಅಹಂಕಾರ, ಮೂರ್ಖತನ, ದಡ್ಡತನ ಮುಂತಾಗಿ ಭಾವಿಸಬಹುದು. ಅದ್ಯಾವುದೂ ಅಲ್ಲ. ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

ನಮಸ್ಕಾರ,
~ರಾಮಕೃಷ್ಣಪ್ಪ

ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...