Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

- Advertisement -
- Advertisement -

ನಿವೃತ್ತ ಮುಖ್ಯ ಶಿಕ್ಷಕರು, ಸಮಾನ ಶಿಕ್ಷಣ, ಸುಸ್ಥಿರ ಪರಿಸರಕ್ಕಾಗಿ ಕಾರ್ಯಕರ್ತ, ಹೋರಾಟಗಾರರಾದ ರಾಮಕೃಷ್ಣಪ್ಪನವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ನಿರಾಕರಿಸಿದ್ದಾರೆ…ಯಾಕೆ? ಇಲ್ಲಿ ಓದಿ.

ರಾಜ್ಯೋತ್ಸವ ಪ್ರಶಸ್ತಿ ಬೇಡ……!!?

ನಾನು ಈ ದೇಶದ ನಾಗರೀಕ. ಜನ ವಿಜ್ಞಾನ ಚಳುವಳಿಯ ಸಾಮಾನ್ಯ ಕಾರ್ಯಕರ್ತ. ನನಗೆ 2019 – 2020 ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ Biodata ಕಳುಹಿಸುವಂತೆ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ online ಪತ್ರ ಬಂದಿದೆ. ಆತ್ಮೀಯ ಗೆಳೆಯ ಕೆಂಕೆರೆ ಮಲ್ಲಿಕಾರ್ಜುನ್ ಮತ್ತು ಸಂಘಟನೆಯ ಸಂಗಾತಿ ಎನ್ ಇಂದಿರಮ್ಮ ವಿವರ ಕಳುಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಶಿಷ್ಯ ಮತ್ತು ಶಿರಡಿ ಸಾಯಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿಠಲ್ ಭೀಮಯ್ಯ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರನ್ನು ಶಿಫಾರಸು ಮಾಡುವಂತೆ ಫೇಸ್‌ಬುಕ್‌ನಲ್ಲಿ ಕಾನೂನು ಸಚಿವವರಿಗೆ ಮನವಿ ಮಾಡಿದ್ದಾರೆ. ನನ್ನ ಬಗ್ಗೆ ಅಭಿಮಾನವಿಟ್ಟಿರುವ ಆತ್ಮೀಯ ಗೆಳೆಯರು ಮತ್ತು ಅಧಿಕಾರಿಗಳಿಗೆ ನಾನು ಆಬಾರಿ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ರಾಜ್ಯೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಬೇಕೇ? ಈಗಿನ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ನಾನೇ ಪ್ರಶ್ನಿಸಿಕೊಂಡೆ?

  1. ಕೃಷಿ ಮತ್ತು ರೈತ ಸಮುದಾಯಕ್ಕೆ ಮಾರಕವಾಗಬಹುದಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೊಂಡಿರುವಾಗ ರೈತನಾದ ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದರೆ ನನ್ನ ಒಡನಾಡಿ ಅನ್ನದಾತರಿಗೆ ಮಾಡುವ ವಂಚನೆಯಾಗುವುದಿಲ್ಲವೇ?
  2. ಶಿಕ್ಷಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅನಾಥವಾಗಿರುವ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪ್ರಯತ್ನಗಳಿಲ್ಲದೆ ಅವುಗಳನ್ನು ಮುಚ್ಚಲು ತಯಾರಿ ನಡೆದಿರುವ ಸಂದರ್ಭದಲ್ಲಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಕಾರ್ಯಕರ್ತನಾದ ನಾನು ಪ್ರಶಸ್ತಿ ಪಡೆಯುವುದು ಕುಗ್ರಾಮಗಳ ಮತ್ತು ಆರ್ಥಿಕ ಅಶಕ್ತರ ಮಕ್ಕಳ ಶಿಕ್ಷಣವನ್ನು ನಿರಾಕರಿಸಲು ಕೈಜೋಡಿಸಿದಂತಲ್ಲವೇ!!
  3. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮತ್ವ ಕುಸಿಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ಮಾಧ್ಯಮ ವಿಜೃಂಭಿಸುತ್ತಿದೆ. ಹಿಂದಿ ಹೇರಿಕೆಯಾಗುತ್ತಿದೆ. ಇಂತಹ ಕನ್ನಡ ಅನಾಥವಾಗಿರುವ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ “ಕನ್ನಡ” ರಾಜ್ಯೋತ್ಸವ ಪ್ರಶಸ್ತಿ ಕೇಳುವುದು ಕನ್ನಡಮ್ಮನಿಗೆ ಎಸಗುವ ದ್ರೋಹ ಅಲ್ಲವೇ?
  4. ಭೂಮಂಡಲದಲ್ಲಿ ಪಾರಿಸಾರಿಕ ಮಹತ್ವ ಪಡೆದಿರುವ ಪಶ್ಚಿಮ ಘಟ್ಟಗಳು ದಾಳಿಗೊಳಗಾಗಿವೆ, ನೈಸರ್ಗಿಕ ಸಂಪನ್ಮೂಲಗಳು(ನೀರು,ಖನಿಜ, ಕಲ್ಲು, ಮರಳು.. ) ಲೂಟಿಯಾಗುತ್ತಿರುವ ಸಮಯದಲ್ಲಿ, ಗಾಡ್ಗೀಳ್‌‌ರವರ ಜೊತೆ ಜೀವ ವೈವಿಧ್ಯ ದಾಖಲಾತಿ ಮಾಡಿರುವ ಮತ್ತು ಅರಣ್ಯ ಬೆಳೆಸುವ ಪ್ರಯತ್ನದಲ್ಲಿರುವ ನಾನು ಪ್ರಶಸ್ತಿಗೆ ಅಹವಾಲು ಸಲ್ಲಿಸುವುದು ಪರಿಸರ ವಿನಾಶಕ್ಕೆ ಕುಮ್ಮಕ್ಕು ಕೊಟ್ಟಂತಲ್ಲವೇ!?
  5. ಪರಿಹಾರ ಸಿಗದ ನೆರೆ ಸಂತ್ರಸ್ತರು ಮತ್ತು ಅರಣ್ಯವನ್ನೇ ನಂಬಿ ಸಾವಿರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮುಗ್ಧ ಅರಣ್ಯ ವಾಸಿಗಳು ಕಾಡಿನಿಂದ ಹೊರದಬ್ಬಲ್ಪಟ್ಟು ಬೆತ್ತಲೆಯಾಗಿ ಬೀದಿಯಲ್ಲಿ ಬಿದ್ದಿರುವಾಗ ಪ್ರಶಸ್ತಿ ಸಂದರ್ಭದಲ್ಲಿ ಹೊದ್ದಿಸುವ ಶಾಲು ನನ್ನನ್ನು ಅಣಕಿಸುವುದಿಲ್ಲವೇ??
  6. ಕೊರೊನಾ ತಂದಿತ್ತ ಸಂಕಷ್ಟದಿಂದ ಪಾರಾಗಲು ನೂರಾರು ಕಿ. ಮೀ. ಲಗೇಜು, ಕುಟುಂಬ ಸಮೇತ ಊರುಗಳಿಗೆ ಮರಳಿದ, ಇನ್ನೂ ಅತಂತ್ರರಾಗಿರುವ ಈ ದೇಶಕ್ಕಾಗಿ ದುಡಿದ ವಲಸೆ ಕಾರ್ಮಿಕರ ಮಕ್ಕಳು ಹಿಡಿ ಅನ್ನಕ್ಕಾಗಿ ಕೈಚಾಚಿದಂತೆ ಗೋಚರಿಸುವುದಿಲ್ಲವೇ ಪ್ರಶಸ್ತಿ ಫಲಕ!!!!
  7. ದಶಕಗಳಿಂದ ಉತ್ತಿ ಬಿತ್ತಿ ಜೀವ ಸವೆಸಿರುವ ಭೂಹೀನರಿಗೆ ನೀಡಬೇಕಿರುವ ಸಾಗುವಳಿ ಪತ್ರ ಮತ್ತು ವಸತಿ ರಹಿರಿಗೆ ಕೊಡಬೇಕಿರುವ ಹಕ್ಕು “ಪತ್ರ ಪ್ರಶಸ್ತಿ” ಪತ್ರಕ್ಕಿಂತ ಹೆಚ್ಚು ಮೌಲ್ಯಯುತವಾದುದಲ್ಲವೇ??
  8. ಗಾಂಧಿ ಪ್ರತಿಪಾದಿಸಿದ ಮೌಲ್ಯ ಗಳು ಹಿನ್ನಲೆಗೆ ಸರಿದು ಗೂಡ್ಸೆ ಸಂಸ್ಕೃತಿ ಮುನ್ನೆಲೆಗೆ ಬರುತ್ತಿರುವ ಕಾಲಘಟ್ಟದಲ್ಲಿ Gandhian collective India ದ ಸತ್ಯಾಗ್ರಹಿಯಾದ ನಾನು ಪ್ರಶಸ್ತಿ ಬಯಸುವುದು ಗಾಂಧಿ ಮತ್ತು ಇತಿಹಾಸಕ್ಕೆ ಅಪಚಾರ ಎಸಗಿದಂತಲ್ಲವೇ??
  9. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯ, ಕೋಮು ಗಲಭೆ, ವೈಚಾರಿಕ ಚಿಂತಕರ ಬಂಧನ ಮುಂತಾದವುಗಳು ತಗ್ಗಿಲ್ಲ, ಗೌರಿ, ಕಲ್ಬುರ್ಗಿಯಂತಹ ವಿಚಾರವಾದಿಗಳನ್ನು ಕಳೆದು ಕೊಂಡಿರುವ ವಿಜ್ಞಾನ ಸಂಘಟನೆಗಳ ಕಾರ್ಯಕರ್ತನಾದ ನಾನು ನನ್ನ ವಿವೇಕ ಮತ್ತು ಆತ್ಮ ಸಾಕ್ಷಿಗೆ ಅನುಗುಣವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವುದಿಲ್ಲ.

ನನ್ನ ಈ ನಿರ್ಧಾರ ಅಹಂಕಾರ, ಮೂರ್ಖತನ, ದಡ್ಡತನ ಮುಂತಾಗಿ ಭಾವಿಸಬಹುದು. ಅದ್ಯಾವುದೂ ಅಲ್ಲ. ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

ನಮಸ್ಕಾರ,
~ರಾಮಕೃಷ್ಣಪ್ಪ

ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...