Homeಕರ್ನಾಟಕರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

- Advertisement -
- Advertisement -

ನಿವೃತ್ತ ಮುಖ್ಯ ಶಿಕ್ಷಕರು, ಸಮಾನ ಶಿಕ್ಷಣ, ಸುಸ್ಥಿರ ಪರಿಸರಕ್ಕಾಗಿ ಕಾರ್ಯಕರ್ತ, ಹೋರಾಟಗಾರರಾದ ರಾಮಕೃಷ್ಣಪ್ಪನವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ನಿರಾಕರಿಸಿದ್ದಾರೆ…ಯಾಕೆ? ಇಲ್ಲಿ ಓದಿ.

ರಾಜ್ಯೋತ್ಸವ ಪ್ರಶಸ್ತಿ ಬೇಡ……!!?

ನಾನು ಈ ದೇಶದ ನಾಗರೀಕ. ಜನ ವಿಜ್ಞಾನ ಚಳುವಳಿಯ ಸಾಮಾನ್ಯ ಕಾರ್ಯಕರ್ತ. ನನಗೆ 2019 – 2020 ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಾಗಿ Biodata ಕಳುಹಿಸುವಂತೆ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಿಂದ online ಪತ್ರ ಬಂದಿದೆ. ಆತ್ಮೀಯ ಗೆಳೆಯ ಕೆಂಕೆರೆ ಮಲ್ಲಿಕಾರ್ಜುನ್ ಮತ್ತು ಸಂಘಟನೆಯ ಸಂಗಾತಿ ಎನ್ ಇಂದಿರಮ್ಮ ವಿವರ ಕಳುಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನನ್ನ ಶಿಷ್ಯ ಮತ್ತು ಶಿರಡಿ ಸಾಯಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ವಿಠಲ್ ಭೀಮಯ್ಯ ರಾಜ್ಯೋತ್ಸವ ಪ್ರಶಸ್ತಿಗೆ ನನ್ನ ಹೆಸರನ್ನು ಶಿಫಾರಸು ಮಾಡುವಂತೆ ಫೇಸ್‌ಬುಕ್‌ನಲ್ಲಿ ಕಾನೂನು ಸಚಿವವರಿಗೆ ಮನವಿ ಮಾಡಿದ್ದಾರೆ. ನನ್ನ ಬಗ್ಗೆ ಅಭಿಮಾನವಿಟ್ಟಿರುವ ಆತ್ಮೀಯ ಗೆಳೆಯರು ಮತ್ತು ಅಧಿಕಾರಿಗಳಿಗೆ ನಾನು ಆಬಾರಿ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ರಾಜ್ಯೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಬೇಕೇ? ಈಗಿನ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ನನ್ನನ್ನು ನಾನೇ ಪ್ರಶ್ನಿಸಿಕೊಂಡೆ?

  1. ಕೃಷಿ ಮತ್ತು ರೈತ ಸಮುದಾಯಕ್ಕೆ ಮಾರಕವಾಗಬಹುದಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಜಾರಿಗೊಂಡಿರುವಾಗ ರೈತನಾದ ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದರೆ ನನ್ನ ಒಡನಾಡಿ ಅನ್ನದಾತರಿಗೆ ಮಾಡುವ ವಂಚನೆಯಾಗುವುದಿಲ್ಲವೇ?
  2. ಶಿಕ್ಷಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅನಾಥವಾಗಿರುವ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪ್ರಯತ್ನಗಳಿಲ್ಲದೆ ಅವುಗಳನ್ನು ಮುಚ್ಚಲು ತಯಾರಿ ನಡೆದಿರುವ ಸಂದರ್ಭದಲ್ಲಿ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಕಾರ್ಯಕರ್ತನಾದ ನಾನು ಪ್ರಶಸ್ತಿ ಪಡೆಯುವುದು ಕುಗ್ರಾಮಗಳ ಮತ್ತು ಆರ್ಥಿಕ ಅಶಕ್ತರ ಮಕ್ಕಳ ಶಿಕ್ಷಣವನ್ನು ನಿರಾಕರಿಸಲು ಕೈಜೋಡಿಸಿದಂತಲ್ಲವೇ!!
  3. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮತ್ವ ಕುಸಿಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಇಂಗ್ಲಿಷ್ ಮಾಧ್ಯಮ ವಿಜೃಂಭಿಸುತ್ತಿದೆ. ಹಿಂದಿ ಹೇರಿಕೆಯಾಗುತ್ತಿದೆ. ಇಂತಹ ಕನ್ನಡ ಅನಾಥವಾಗಿರುವ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಒಬ್ಬ ಸದಸ್ಯನಾಗಿ “ಕನ್ನಡ” ರಾಜ್ಯೋತ್ಸವ ಪ್ರಶಸ್ತಿ ಕೇಳುವುದು ಕನ್ನಡಮ್ಮನಿಗೆ ಎಸಗುವ ದ್ರೋಹ ಅಲ್ಲವೇ?
  4. ಭೂಮಂಡಲದಲ್ಲಿ ಪಾರಿಸಾರಿಕ ಮಹತ್ವ ಪಡೆದಿರುವ ಪಶ್ಚಿಮ ಘಟ್ಟಗಳು ದಾಳಿಗೊಳಗಾಗಿವೆ, ನೈಸರ್ಗಿಕ ಸಂಪನ್ಮೂಲಗಳು(ನೀರು,ಖನಿಜ, ಕಲ್ಲು, ಮರಳು.. ) ಲೂಟಿಯಾಗುತ್ತಿರುವ ಸಮಯದಲ್ಲಿ, ಗಾಡ್ಗೀಳ್‌‌ರವರ ಜೊತೆ ಜೀವ ವೈವಿಧ್ಯ ದಾಖಲಾತಿ ಮಾಡಿರುವ ಮತ್ತು ಅರಣ್ಯ ಬೆಳೆಸುವ ಪ್ರಯತ್ನದಲ್ಲಿರುವ ನಾನು ಪ್ರಶಸ್ತಿಗೆ ಅಹವಾಲು ಸಲ್ಲಿಸುವುದು ಪರಿಸರ ವಿನಾಶಕ್ಕೆ ಕುಮ್ಮಕ್ಕು ಕೊಟ್ಟಂತಲ್ಲವೇ!?
  5. ಪರಿಹಾರ ಸಿಗದ ನೆರೆ ಸಂತ್ರಸ್ತರು ಮತ್ತು ಅರಣ್ಯವನ್ನೇ ನಂಬಿ ಸಾವಿರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮುಗ್ಧ ಅರಣ್ಯ ವಾಸಿಗಳು ಕಾಡಿನಿಂದ ಹೊರದಬ್ಬಲ್ಪಟ್ಟು ಬೆತ್ತಲೆಯಾಗಿ ಬೀದಿಯಲ್ಲಿ ಬಿದ್ದಿರುವಾಗ ಪ್ರಶಸ್ತಿ ಸಂದರ್ಭದಲ್ಲಿ ಹೊದ್ದಿಸುವ ಶಾಲು ನನ್ನನ್ನು ಅಣಕಿಸುವುದಿಲ್ಲವೇ??
  6. ಕೊರೊನಾ ತಂದಿತ್ತ ಸಂಕಷ್ಟದಿಂದ ಪಾರಾಗಲು ನೂರಾರು ಕಿ. ಮೀ. ಲಗೇಜು, ಕುಟುಂಬ ಸಮೇತ ಊರುಗಳಿಗೆ ಮರಳಿದ, ಇನ್ನೂ ಅತಂತ್ರರಾಗಿರುವ ಈ ದೇಶಕ್ಕಾಗಿ ದುಡಿದ ವಲಸೆ ಕಾರ್ಮಿಕರ ಮಕ್ಕಳು ಹಿಡಿ ಅನ್ನಕ್ಕಾಗಿ ಕೈಚಾಚಿದಂತೆ ಗೋಚರಿಸುವುದಿಲ್ಲವೇ ಪ್ರಶಸ್ತಿ ಫಲಕ!!!!
  7. ದಶಕಗಳಿಂದ ಉತ್ತಿ ಬಿತ್ತಿ ಜೀವ ಸವೆಸಿರುವ ಭೂಹೀನರಿಗೆ ನೀಡಬೇಕಿರುವ ಸಾಗುವಳಿ ಪತ್ರ ಮತ್ತು ವಸತಿ ರಹಿರಿಗೆ ಕೊಡಬೇಕಿರುವ ಹಕ್ಕು “ಪತ್ರ ಪ್ರಶಸ್ತಿ” ಪತ್ರಕ್ಕಿಂತ ಹೆಚ್ಚು ಮೌಲ್ಯಯುತವಾದುದಲ್ಲವೇ??
  8. ಗಾಂಧಿ ಪ್ರತಿಪಾದಿಸಿದ ಮೌಲ್ಯ ಗಳು ಹಿನ್ನಲೆಗೆ ಸರಿದು ಗೂಡ್ಸೆ ಸಂಸ್ಕೃತಿ ಮುನ್ನೆಲೆಗೆ ಬರುತ್ತಿರುವ ಕಾಲಘಟ್ಟದಲ್ಲಿ Gandhian collective India ದ ಸತ್ಯಾಗ್ರಹಿಯಾದ ನಾನು ಪ್ರಶಸ್ತಿ ಬಯಸುವುದು ಗಾಂಧಿ ಮತ್ತು ಇತಿಹಾಸಕ್ಕೆ ಅಪಚಾರ ಎಸಗಿದಂತಲ್ಲವೇ??
  9. ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದೌರ್ಜನ್ಯ, ಕೋಮು ಗಲಭೆ, ವೈಚಾರಿಕ ಚಿಂತಕರ ಬಂಧನ ಮುಂತಾದವುಗಳು ತಗ್ಗಿಲ್ಲ, ಗೌರಿ, ಕಲ್ಬುರ್ಗಿಯಂತಹ ವಿಚಾರವಾದಿಗಳನ್ನು ಕಳೆದು ಕೊಂಡಿರುವ ವಿಜ್ಞಾನ ಸಂಘಟನೆಗಳ ಕಾರ್ಯಕರ್ತನಾದ ನಾನು ನನ್ನ ವಿವೇಕ ಮತ್ತು ಆತ್ಮ ಸಾಕ್ಷಿಗೆ ಅನುಗುಣವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವುದಿಲ್ಲ.

ನನ್ನ ಈ ನಿರ್ಧಾರ ಅಹಂಕಾರ, ಮೂರ್ಖತನ, ದಡ್ಡತನ ಮುಂತಾಗಿ ಭಾವಿಸಬಹುದು. ಅದ್ಯಾವುದೂ ಅಲ್ಲ. ನನ್ನ ಈ ನಿರ್ಧಾರ ರಾಜ್ಯದಾದ್ಯಂತ ನನ್ನ ಸಂಘಟನೆ, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ!!

ನಮಸ್ಕಾರ,
~ರಾಮಕೃಷ್ಣಪ್ಪ

ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...