Homeಮುಖಪುಟಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

ಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

- Advertisement -
- Advertisement -

‘ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ರೈತರು ಹೋರಾಟಕ್ಕೆ ಬಂದು ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ನವೆಂಬರ್ 26 ರಂದು ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ತಿಳಿಸಿದೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಅದು ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲಿ ಹಂಚಿಕೊಳ್ಳಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭುಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ನವೆಂಬರ್ 26 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಲಾಗಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಮಾತನಾಡಿ, “ನರೇಂದ್ರ ಮೋದಿಯವರು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಎಂಎಸ್‌ಪಿ ಬಗ್ಗೆ, ವಿದ್ಯುಚ್ಛಕ್ತಿ ಮಸೂದೆ ಅವರು ಮಾತನಾಡಿಲ್ಲ. ಗಡಿಗಳಲ್ಲಿ ಹುತಾತ್ಮರಾದ 670ಕ್ಕೂ ಹೆಚ್ಚು ರೈತರ ಬಗ್ಗೆ, ಅವರಿಗೆ ಪರಿಹಾರ ಕೊಡುವ ಚಕಾರವೆತ್ತಿಲ್ಲ. ಇನ್ನು ರಾಜ್ಯ ಸರ್ಕಾರವೂ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯಬೇಕಾಗಿತ್ತು. ಅದಕ್ಕಾಗಿ ನಾವು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದೇವೆ. ಹಾಗಾಗಿ ಎಲ್ಲಾ ಪ್ರಯಾಣಿಕರು ಅಂದು ಹಗಲಿನ ಪ್ರಯಾಣವನ್ನು ಜನತೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

‘ದೆಹಲಿಯ ಗಡಿಯಲ್ಲಿ ರೈತರ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 25 ರಂದು ಹೈದರಾಬಾದ್‌ನಲ್ಲಿ ‘ಮಹಾ ಧರಣಿ’ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹಾ ಧರಣಿಯಲ್ಲಿ ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಇತರ ಸಾಮೂಹಿಕ ಸಂಘಟನೆಗಳ ಮುಖಂಡರು ಸಹ ಭಾಗವಹಿಸಲಿದ್ದಾರೆ’ ಎನ್ನಲಾಗಿದೆ.


ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...