Homeಮುಖಪುಟಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

ಚಾರಿತ್ರಿಕ ರೈತ ಹೋರಾಟಕ್ಕೆ ಒಂದು ವರ್ಷ: ನ.26ರ ಕಾರ್ಯಕ್ರಮಗಳು ಇಂತಿವೆ

- Advertisement -
- Advertisement -

‘ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ರೈತರು ಹೋರಾಟಕ್ಕೆ ಬಂದು ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ನವೆಂಬರ್ 26 ರಂದು ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ತಿಳಿಸಿದೆ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಅದು ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲಿ ಹಂಚಿಕೊಳ್ಳಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭುಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ನವೆಂಬರ್ 26 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಲಾಗಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಮಾತನಾಡಿ, “ನರೇಂದ್ರ ಮೋದಿಯವರು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಎಂಎಸ್‌ಪಿ ಬಗ್ಗೆ, ವಿದ್ಯುಚ್ಛಕ್ತಿ ಮಸೂದೆ ಅವರು ಮಾತನಾಡಿಲ್ಲ. ಗಡಿಗಳಲ್ಲಿ ಹುತಾತ್ಮರಾದ 670ಕ್ಕೂ ಹೆಚ್ಚು ರೈತರ ಬಗ್ಗೆ, ಅವರಿಗೆ ಪರಿಹಾರ ಕೊಡುವ ಚಕಾರವೆತ್ತಿಲ್ಲ. ಇನ್ನು ರಾಜ್ಯ ಸರ್ಕಾರವೂ ತನ್ನ ಕಾಯ್ದೆಗಳನ್ನು ವಾಪಸ್ ಪಡೆಯಬೇಕಾಗಿತ್ತು. ಅದಕ್ಕಾಗಿ ನಾವು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದೇವೆ. ಹಾಗಾಗಿ ಎಲ್ಲಾ ಪ್ರಯಾಣಿಕರು ಅಂದು ಹಗಲಿನ ಪ್ರಯಾಣವನ್ನು ಜನತೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

‘ದೆಹಲಿಯ ಗಡಿಯಲ್ಲಿ ರೈತರ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 25 ರಂದು ಹೈದರಾಬಾದ್‌ನಲ್ಲಿ ‘ಮಹಾ ಧರಣಿ’ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹಾ ಧರಣಿಯಲ್ಲಿ ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಇತರ ಸಾಮೂಹಿಕ ಸಂಘಟನೆಗಳ ಮುಖಂಡರು ಸಹ ಭಾಗವಹಿಸಲಿದ್ದಾರೆ’ ಎನ್ನಲಾಗಿದೆ.


ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...