Homeಚಳವಳಿ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ - ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

- Advertisement -
- Advertisement -

ಇವರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು. ಜೈಲಿನಂದ ಬಿಡುಗಡೆಗೊಂಡ ಇವರು ಮತ್ತೆ ಪ್ರಭುತ್ವಕ್ಕೆ ಸವಾಲು ಹಾಕಿದ್ದಾರೆ. ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ…..’’ ಎಂದು ಹೇಳಿದ್ದಾರೆ.

ನತಾಶಾ ನರ್ವಾಲ್‍, ದೇವಾಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

“ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು” ಎಂದು ಕಾಳಿತಾ ಜೈಲು ದ್ವಾರಗಳಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಲ್ಲಿ ವಿದ್ಯಾರ್ಥಿ ಬೆಂಬಲಿಗರು ನೆರೆದಿದ್ದರು.

ನತಾಶಾ ನರ್ವಾಲ್‍‌, “ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

“ನಾವು ನಂಬಿದ್ದನ್ನು ಎತ್ತಿಹಿಡಿದಿದ್ದಕ್ಕಾಗಿ ದೆಹಲಿ ಹೈಕೋರ್ಟ್‍ಗೆ ಧನ್ಯವಾದ ಹೇಳಲು ನಾವು ಬಯಸುತ್ತೇವೆ. ನಾವು ಮಾಡಿದ ಯಾವುದೇ ಪ್ರತಿಭಟನೆಯು ಭಯೋತ್ಪಾದನೆಯಲ್ಲ. ಇದು ಮಹಿಳೆಯರ ನೇತೃತ್ವದ ಪ್ರಜಾತಾಂತ್ರಿಕ ಪ್ರತಿಭಟನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರು ನಮಗೆ ಜೈಲುವಾಸದ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ನತಾಶಾ ನರ್ವಾಲ್‍ ಹೇಳಿದ್ದಾರೆ. ಅವರ ತಂದೆ ಮಹಾವೀರ್ ನರ್ವಾಲ್‍ ಮೇ ತಿಂಗಳಲ್ಲಿ ಕೊರೊನಾದಿಂದ ನಿಧನರಾಗಿದ್ದರು. ನತಾಶಾರನ್ನು ಸ್ವೀಕರಿಸಲು ಬಂದ ಅವರ ಸಹೋದರ, “ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಬದುಕಿದ್ದರೆ ಅವರು ಇವತ್ತು ಮಗಳನ್ನು ಕರೆದೊಯ್ಯಲು ಇಲ್ಲಿಗೆ ಬರುತ್ತಿದ್ದರು” ಎಂದು ಹೇಳಿದ್ದಾರೆ.

“ತಂದೆಯ ಮರಣವನ್ನು ನಾನು ಹೇಗೆ ಎದುರಿಸುತ್ತೇನೆಂದು ನನಗೆ ತಿಳಿದಿಲ್ಲ…ಸೆರೆವಾಸದ ವ್ಯವಸ್ಥೆಯು ನಮ್ಮ ಪ್ರೀತಿಪಾತ್ರರಿಂದ ನಮ್ಮನ್ನು ಹೇಗೆ ಬೇರ್ಪಡಿಸುತ್ತದೆ ಎಂಬುದಕ್ಕೆ ಇದು ಒಂದು ಸೂಚನೆ ಅಥವಾ ಜ್ಞಾಪನೆ ಆಗಿರಬೇಕು. ನನ್ನ ಪ್ರಕರಣವನ್ನು ಹೈಲೈಟ್‍ ಮಾಡಲಾಗಿದೆ. ಆದರೆ ನನಗೆ ಒಂದು ಫೋನ್‍ ಕಾಲ ಕೂಡ ತಲುಪದಂತೆ ಮಾಡಲಾಗಿತ್ತು” ಎಂದು ನರ್ವಾಲ್‍ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ಭಯೋತ್ಪಾದನೆ ಮತ್ತು ಭಿನ್ನಾಭಿಪ್ರಾಯದ ನಡುವಿನ ರೇಖೆಯು ಮಸುಕಾಗಿರುವಂತಹ ಹಂತಕ್ಕೆ ನಾವು ಹೇಗೆ ತಲುಪಿದ್ದೇವೆ ಎಂದು ನಾವು ನಮ್ಮನ್ನು ಕೇಳಿಕೊಳ್ಳಬೇಕು. ಜನರನ್ನು ಕ್ಷುಲ್ಲಕ ಆರೋಪಗಳ ಕಾರಣಕ್ಕೆ ಜೈಲಿಗೆ ಹಾಕಲಾಗುತ್ತಿದೆ. ಜನರು ಪ್ರತಿಭಟಿಸಿದ ಕೂಡಲೆ ಅದು ಭಯೋತ್ಪಾದನೆಯಲ್ಲ” ಎಂದು ನರ್ವಾಲ್ ‍ಹೇಳಿದ್ದಾರೆ.

ನತಾಶಾ ನರ್ವಾಲ್‍ ಮತ್ತು ಇತರ ಇಬ್ಬರು ವಿದ್ಯಾರ್ಥಿ ಹೋರಾಟಗಾರರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ ನರ್ವಾಲ್‍, ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಿದ ಎರಡು ದಿನಗಳ ನಂತರ ಈ ಮೂವರನ್ನು ತಕ್ಷಣ ಬಿಡುಗಡೆ ಮಾಡುವ ಆದೇಶ ಬಂದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್‌ ತೀರ್ಪಿನ ವಿರುದ್ಧ ದೆಹಲಿ ಪೊಲೀಸ್ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...