Homeಚಳವಳಿ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ - ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

- Advertisement -
- Advertisement -

ಇವರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು. ಜೈಲಿನಂದ ಬಿಡುಗಡೆಗೊಂಡ ಇವರು ಮತ್ತೆ ಪ್ರಭುತ್ವಕ್ಕೆ ಸವಾಲು ಹಾಕಿದ್ದಾರೆ. ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ…..’’ ಎಂದು ಹೇಳಿದ್ದಾರೆ.

ನತಾಶಾ ನರ್ವಾಲ್‍, ದೇವಾಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

“ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು” ಎಂದು ಕಾಳಿತಾ ಜೈಲು ದ್ವಾರಗಳಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಲ್ಲಿ ವಿದ್ಯಾರ್ಥಿ ಬೆಂಬಲಿಗರು ನೆರೆದಿದ್ದರು.

ನತಾಶಾ ನರ್ವಾಲ್‍‌, “ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

“ನಾವು ನಂಬಿದ್ದನ್ನು ಎತ್ತಿಹಿಡಿದಿದ್ದಕ್ಕಾಗಿ ದೆಹಲಿ ಹೈಕೋರ್ಟ್‍ಗೆ ಧನ್ಯವಾದ ಹೇಳಲು ನಾವು ಬಯಸುತ್ತೇವೆ. ನಾವು ಮಾಡಿದ ಯಾವುದೇ ಪ್ರತಿಭಟನೆಯು ಭಯೋತ್ಪಾದನೆಯಲ್ಲ. ಇದು ಮಹಿಳೆಯರ ನೇತೃತ್ವದ ಪ್ರಜಾತಾಂತ್ರಿಕ ಪ್ರತಿಭಟನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರು ನಮಗೆ ಜೈಲುವಾಸದ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ನತಾಶಾ ನರ್ವಾಲ್‍ ಹೇಳಿದ್ದಾರೆ. ಅವರ ತಂದೆ ಮಹಾವೀರ್ ನರ್ವಾಲ್‍ ಮೇ ತಿಂಗಳಲ್ಲಿ ಕೊರೊನಾದಿಂದ ನಿಧನರಾಗಿದ್ದರು. ನತಾಶಾರನ್ನು ಸ್ವೀಕರಿಸಲು ಬಂದ ಅವರ ಸಹೋದರ, “ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಬದುಕಿದ್ದರೆ ಅವರು ಇವತ್ತು ಮಗಳನ್ನು ಕರೆದೊಯ್ಯಲು ಇಲ್ಲಿಗೆ ಬರುತ್ತಿದ್ದರು” ಎಂದು ಹೇಳಿದ್ದಾರೆ.

“ತಂದೆಯ ಮರಣವನ್ನು ನಾನು ಹೇಗೆ ಎದುರಿಸುತ್ತೇನೆಂದು ನನಗೆ ತಿಳಿದಿಲ್ಲ…ಸೆರೆವಾಸದ ವ್ಯವಸ್ಥೆಯು ನಮ್ಮ ಪ್ರೀತಿಪಾತ್ರರಿಂದ ನಮ್ಮನ್ನು ಹೇಗೆ ಬೇರ್ಪಡಿಸುತ್ತದೆ ಎಂಬುದಕ್ಕೆ ಇದು ಒಂದು ಸೂಚನೆ ಅಥವಾ ಜ್ಞಾಪನೆ ಆಗಿರಬೇಕು. ನನ್ನ ಪ್ರಕರಣವನ್ನು ಹೈಲೈಟ್‍ ಮಾಡಲಾಗಿದೆ. ಆದರೆ ನನಗೆ ಒಂದು ಫೋನ್‍ ಕಾಲ ಕೂಡ ತಲುಪದಂತೆ ಮಾಡಲಾಗಿತ್ತು” ಎಂದು ನರ್ವಾಲ್‍ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ಭಯೋತ್ಪಾದನೆ ಮತ್ತು ಭಿನ್ನಾಭಿಪ್ರಾಯದ ನಡುವಿನ ರೇಖೆಯು ಮಸುಕಾಗಿರುವಂತಹ ಹಂತಕ್ಕೆ ನಾವು ಹೇಗೆ ತಲುಪಿದ್ದೇವೆ ಎಂದು ನಾವು ನಮ್ಮನ್ನು ಕೇಳಿಕೊಳ್ಳಬೇಕು. ಜನರನ್ನು ಕ್ಷುಲ್ಲಕ ಆರೋಪಗಳ ಕಾರಣಕ್ಕೆ ಜೈಲಿಗೆ ಹಾಕಲಾಗುತ್ತಿದೆ. ಜನರು ಪ್ರತಿಭಟಿಸಿದ ಕೂಡಲೆ ಅದು ಭಯೋತ್ಪಾದನೆಯಲ್ಲ” ಎಂದು ನರ್ವಾಲ್ ‍ಹೇಳಿದ್ದಾರೆ.

ನತಾಶಾ ನರ್ವಾಲ್‍ ಮತ್ತು ಇತರ ಇಬ್ಬರು ವಿದ್ಯಾರ್ಥಿ ಹೋರಾಟಗಾರರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ ನರ್ವಾಲ್‍, ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಿದ ಎರಡು ದಿನಗಳ ನಂತರ ಈ ಮೂವರನ್ನು ತಕ್ಷಣ ಬಿಡುಗಡೆ ಮಾಡುವ ಆದೇಶ ಬಂದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್‌ ತೀರ್ಪಿನ ವಿರುದ್ಧ ದೆಹಲಿ ಪೊಲೀಸ್ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...