Homeಚಳವಳಿ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ - ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

- Advertisement -
- Advertisement -

ಇವರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು. ಜೈಲಿನಂದ ಬಿಡುಗಡೆಗೊಂಡ ಇವರು ಮತ್ತೆ ಪ್ರಭುತ್ವಕ್ಕೆ ಸವಾಲು ಹಾಕಿದ್ದಾರೆ. ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ…..’’ ಎಂದು ಹೇಳಿದ್ದಾರೆ.

ನತಾಶಾ ನರ್ವಾಲ್‍, ದೇವಾಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

“ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು” ಎಂದು ಕಾಳಿತಾ ಜೈಲು ದ್ವಾರಗಳಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಲ್ಲಿ ವಿದ್ಯಾರ್ಥಿ ಬೆಂಬಲಿಗರು ನೆರೆದಿದ್ದರು.

ನತಾಶಾ ನರ್ವಾಲ್‍‌, “ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

“ನಾವು ನಂಬಿದ್ದನ್ನು ಎತ್ತಿಹಿಡಿದಿದ್ದಕ್ಕಾಗಿ ದೆಹಲಿ ಹೈಕೋರ್ಟ್‍ಗೆ ಧನ್ಯವಾದ ಹೇಳಲು ನಾವು ಬಯಸುತ್ತೇವೆ. ನಾವು ಮಾಡಿದ ಯಾವುದೇ ಪ್ರತಿಭಟನೆಯು ಭಯೋತ್ಪಾದನೆಯಲ್ಲ. ಇದು ಮಹಿಳೆಯರ ನೇತೃತ್ವದ ಪ್ರಜಾತಾಂತ್ರಿಕ ಪ್ರತಿಭಟನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರು ನಮಗೆ ಜೈಲುವಾಸದ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ನತಾಶಾ ನರ್ವಾಲ್‍ ಹೇಳಿದ್ದಾರೆ. ಅವರ ತಂದೆ ಮಹಾವೀರ್ ನರ್ವಾಲ್‍ ಮೇ ತಿಂಗಳಲ್ಲಿ ಕೊರೊನಾದಿಂದ ನಿಧನರಾಗಿದ್ದರು. ನತಾಶಾರನ್ನು ಸ್ವೀಕರಿಸಲು ಬಂದ ಅವರ ಸಹೋದರ, “ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಬದುಕಿದ್ದರೆ ಅವರು ಇವತ್ತು ಮಗಳನ್ನು ಕರೆದೊಯ್ಯಲು ಇಲ್ಲಿಗೆ ಬರುತ್ತಿದ್ದರು” ಎಂದು ಹೇಳಿದ್ದಾರೆ.

“ತಂದೆಯ ಮರಣವನ್ನು ನಾನು ಹೇಗೆ ಎದುರಿಸುತ್ತೇನೆಂದು ನನಗೆ ತಿಳಿದಿಲ್ಲ…ಸೆರೆವಾಸದ ವ್ಯವಸ್ಥೆಯು ನಮ್ಮ ಪ್ರೀತಿಪಾತ್ರರಿಂದ ನಮ್ಮನ್ನು ಹೇಗೆ ಬೇರ್ಪಡಿಸುತ್ತದೆ ಎಂಬುದಕ್ಕೆ ಇದು ಒಂದು ಸೂಚನೆ ಅಥವಾ ಜ್ಞಾಪನೆ ಆಗಿರಬೇಕು. ನನ್ನ ಪ್ರಕರಣವನ್ನು ಹೈಲೈಟ್‍ ಮಾಡಲಾಗಿದೆ. ಆದರೆ ನನಗೆ ಒಂದು ಫೋನ್‍ ಕಾಲ ಕೂಡ ತಲುಪದಂತೆ ಮಾಡಲಾಗಿತ್ತು” ಎಂದು ನರ್ವಾಲ್‍ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ಭಯೋತ್ಪಾದನೆ ಮತ್ತು ಭಿನ್ನಾಭಿಪ್ರಾಯದ ನಡುವಿನ ರೇಖೆಯು ಮಸುಕಾಗಿರುವಂತಹ ಹಂತಕ್ಕೆ ನಾವು ಹೇಗೆ ತಲುಪಿದ್ದೇವೆ ಎಂದು ನಾವು ನಮ್ಮನ್ನು ಕೇಳಿಕೊಳ್ಳಬೇಕು. ಜನರನ್ನು ಕ್ಷುಲ್ಲಕ ಆರೋಪಗಳ ಕಾರಣಕ್ಕೆ ಜೈಲಿಗೆ ಹಾಕಲಾಗುತ್ತಿದೆ. ಜನರು ಪ್ರತಿಭಟಿಸಿದ ಕೂಡಲೆ ಅದು ಭಯೋತ್ಪಾದನೆಯಲ್ಲ” ಎಂದು ನರ್ವಾಲ್ ‍ಹೇಳಿದ್ದಾರೆ.

ನತಾಶಾ ನರ್ವಾಲ್‍ ಮತ್ತು ಇತರ ಇಬ್ಬರು ವಿದ್ಯಾರ್ಥಿ ಹೋರಾಟಗಾರರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ ನರ್ವಾಲ್‍, ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಿದ ಎರಡು ದಿನಗಳ ನಂತರ ಈ ಮೂವರನ್ನು ತಕ್ಷಣ ಬಿಡುಗಡೆ ಮಾಡುವ ಆದೇಶ ಬಂದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್‌ ತೀರ್ಪಿನ ವಿರುದ್ಧ ದೆಹಲಿ ಪೊಲೀಸ್ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...