Homeಚಳವಳಿ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ - ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

- Advertisement -
- Advertisement -

ಇವರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು. ಜೈಲಿನಂದ ಬಿಡುಗಡೆಗೊಂಡ ಇವರು ಮತ್ತೆ ಪ್ರಭುತ್ವಕ್ಕೆ ಸವಾಲು ಹಾಕಿದ್ದಾರೆ. ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ…..’’ ಎಂದು ಹೇಳಿದ್ದಾರೆ.

ನತಾಶಾ ನರ್ವಾಲ್‍, ದೇವಾಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

“ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು” ಎಂದು ಕಾಳಿತಾ ಜೈಲು ದ್ವಾರಗಳಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಲ್ಲಿ ವಿದ್ಯಾರ್ಥಿ ಬೆಂಬಲಿಗರು ನೆರೆದಿದ್ದರು.

ನತಾಶಾ ನರ್ವಾಲ್‍‌, “ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

“ನಾವು ನಂಬಿದ್ದನ್ನು ಎತ್ತಿಹಿಡಿದಿದ್ದಕ್ಕಾಗಿ ದೆಹಲಿ ಹೈಕೋರ್ಟ್‍ಗೆ ಧನ್ಯವಾದ ಹೇಳಲು ನಾವು ಬಯಸುತ್ತೇವೆ. ನಾವು ಮಾಡಿದ ಯಾವುದೇ ಪ್ರತಿಭಟನೆಯು ಭಯೋತ್ಪಾದನೆಯಲ್ಲ. ಇದು ಮಹಿಳೆಯರ ನೇತೃತ್ವದ ಪ್ರಜಾತಾಂತ್ರಿಕ ಪ್ರತಿಭಟನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರು ನಮಗೆ ಜೈಲುವಾಸದ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ನತಾಶಾ ನರ್ವಾಲ್‍ ಹೇಳಿದ್ದಾರೆ. ಅವರ ತಂದೆ ಮಹಾವೀರ್ ನರ್ವಾಲ್‍ ಮೇ ತಿಂಗಳಲ್ಲಿ ಕೊರೊನಾದಿಂದ ನಿಧನರಾಗಿದ್ದರು. ನತಾಶಾರನ್ನು ಸ್ವೀಕರಿಸಲು ಬಂದ ಅವರ ಸಹೋದರ, “ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಬದುಕಿದ್ದರೆ ಅವರು ಇವತ್ತು ಮಗಳನ್ನು ಕರೆದೊಯ್ಯಲು ಇಲ್ಲಿಗೆ ಬರುತ್ತಿದ್ದರು” ಎಂದು ಹೇಳಿದ್ದಾರೆ.

“ತಂದೆಯ ಮರಣವನ್ನು ನಾನು ಹೇಗೆ ಎದುರಿಸುತ್ತೇನೆಂದು ನನಗೆ ತಿಳಿದಿಲ್ಲ…ಸೆರೆವಾಸದ ವ್ಯವಸ್ಥೆಯು ನಮ್ಮ ಪ್ರೀತಿಪಾತ್ರರಿಂದ ನಮ್ಮನ್ನು ಹೇಗೆ ಬೇರ್ಪಡಿಸುತ್ತದೆ ಎಂಬುದಕ್ಕೆ ಇದು ಒಂದು ಸೂಚನೆ ಅಥವಾ ಜ್ಞಾಪನೆ ಆಗಿರಬೇಕು. ನನ್ನ ಪ್ರಕರಣವನ್ನು ಹೈಲೈಟ್‍ ಮಾಡಲಾಗಿದೆ. ಆದರೆ ನನಗೆ ಒಂದು ಫೋನ್‍ ಕಾಲ ಕೂಡ ತಲುಪದಂತೆ ಮಾಡಲಾಗಿತ್ತು” ಎಂದು ನರ್ವಾಲ್‍ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ಭಯೋತ್ಪಾದನೆ ಮತ್ತು ಭಿನ್ನಾಭಿಪ್ರಾಯದ ನಡುವಿನ ರೇಖೆಯು ಮಸುಕಾಗಿರುವಂತಹ ಹಂತಕ್ಕೆ ನಾವು ಹೇಗೆ ತಲುಪಿದ್ದೇವೆ ಎಂದು ನಾವು ನಮ್ಮನ್ನು ಕೇಳಿಕೊಳ್ಳಬೇಕು. ಜನರನ್ನು ಕ್ಷುಲ್ಲಕ ಆರೋಪಗಳ ಕಾರಣಕ್ಕೆ ಜೈಲಿಗೆ ಹಾಕಲಾಗುತ್ತಿದೆ. ಜನರು ಪ್ರತಿಭಟಿಸಿದ ಕೂಡಲೆ ಅದು ಭಯೋತ್ಪಾದನೆಯಲ್ಲ” ಎಂದು ನರ್ವಾಲ್ ‍ಹೇಳಿದ್ದಾರೆ.

ನತಾಶಾ ನರ್ವಾಲ್‍ ಮತ್ತು ಇತರ ಇಬ್ಬರು ವಿದ್ಯಾರ್ಥಿ ಹೋರಾಟಗಾರರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ ನರ್ವಾಲ್‍, ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಿದ ಎರಡು ದಿನಗಳ ನಂತರ ಈ ಮೂವರನ್ನು ತಕ್ಷಣ ಬಿಡುಗಡೆ ಮಾಡುವ ಆದೇಶ ಬಂದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್‌ ತೀರ್ಪಿನ ವಿರುದ್ಧ ದೆಹಲಿ ಪೊಲೀಸ್ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...