Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...