Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...