Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...