Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...