Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ‘ಸಾಧನ’: ರಾಹುಲ್ ಗಾಂಧಿ

0
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಕೆಲವೇಕೆಲವು ಶ್ರೀಮಂತ ಉದ್ಯಮಿಗಳ ಸಾಧನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವುದು, ಭಾರತದ...