Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...