Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...