Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...