Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...