Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....