Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...