Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...