Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...