Homeಕರ್ನಾಟಕಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್‌ ಜೋಶಿಯವರು ಆಯ್ಕೆಯಾದ ಬಳಿಕ ಕಸಾಪದಲ್ಲಿ ಬೇರು ಬಿಟ್ಟಿರುವ ಪಕ್ಷರಾಜಕಾರಣದ ಚರ್ಚೆ ಮುನ್ನೆಲೆಗೆ ಬಂದಿತು. ಜೋಶಿಯವರು ಬಲಪಂಥೀಯ ವಿಚಾರಧಾರೆಗಳಿಗೆ ಹತ್ತಿರವಿದ್ದಾರೆ ಎಂಬ ಟೀಕೆಗಳೂ ವ್ಯಕ್ತವಾಗಿವೆ. ಬಿಜೆಪಿ ಬೆಂಬಲದಿಂದ ಮಹೇಶ್‌ ಜೋಶಿಯವರು ಗೆದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ವಿಜಯ ಕರ್ನಾಟಕ ಪತ್ರಿಕೆ ನಡೆಸಿದ್ದ ಸಂದರ್ಶನದಲ್ಲಿ ‘ಒಂದು ಪಕ್ಷದ ವ್ಯಕ್ತಿಯಾಗಿ ಗುರುತಿಸಿಕೊಂಡು ಮತಗಳನ್ನು ಗಿಟ್ಟಿಸಿಕೊಂಡಿದ್ದೀರಿ ಎಂಬ ಆರೋಪಗಳಿವೆಯಲ್ಲ?’ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ಮಹೇಶ್‌ ಜೋಶಿಯವರು “ನಾನು ರಾಜಕೀಯವಾಗಿ ತಟಸ್ಥ, ಯಾವುದೇ ಪಕ್ಷದ ಸದಸ್ಯನಲ್ಲ, ಗುರುತಿಸಿಕೊಂಡಿಲ್ಲ. ನಾನು ಕನ್ನಡ ಪಂಥದವರು. ನಾನು ಯಾವುದೇ ಪಕ್ಷದ ಬ್ಯಾನರ್‌ ಹಿಡಿದು ಮತ ಕೇಳಿಲ್ಲ. ನನಗೆ ವಿಜಯಪುರದಲ್ಲಿ ಅತಿಹೆಚ್ಚು ಮತಗಳು ಬಂದಿರುವುದು ಮಸ್ಲಿಮರ ಮತಗಳು. ಪಕ್ಷದೊಂದಿಗೆ ಹೋಲಿಕೆ ಮಾಡಿ ಮಾತನಾಡುವುದು ಒಂದು ದುರಂತವಷ್ಟೇ” ಎಂದು ಸ್ಪಷ್ಟನೆ ನೀಡಿದ್ದರು.

ಜೋಶಿಯವರು ದೂರದರ್ಶನದಲ್ಲಿ ದೆಹಲಿ ಮತ್ತು ದಕ್ಷಿಣ ಭಾರತದ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ನಾಡೋಜ, ರಾಷ್ಟ್ರಪತಿಗಳ ಗೃಹರಕ್ಷಕ ದಳ ಗೌರವಾನ್ವಿತ ಸೇವೆಗಾಗಿ ನಾಗರಿಕ ರಕ್ಷಣಾ ಪದಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅತಿದೊಡ್ಡ ಪರಂಪರೆಯನ್ನು ಹೊಂದಿರುವ ಕಸಾಪದಂತಹ ಸಂಸ್ಥೆಯ ಜವಾಬ್ದಾರಿ ಅವರ ಹೆಗಲಿಗೇರಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಅವರೊಂದಿಗೆ ಕಸಾಪ ಅಧ್ಯಕ್ಷರಾದ ಮಹೇಶ್‌ ಜೋಶಿ. (ಚಿತ್ರಕೃಪೆ: ಎಫ್‌ಬಿ, ಮಹೇಶ್‌ ಜೋಶಿಯವರ ಪೇಜ್‌‌)

ಕಸಾಪದಲ್ಲಿ ಮೊದಲಿನಿಂದಲೂ ಪಕ್ಷ ರಾಜಕೀಯ ಬೇರು ಬಿಟ್ಟಿದೆ ಎಂಬುದು ಸುಳ್ಳಲ್ಲ. ಹಣಬಲ, ಜಾತಿ ಬಲ ಕನ್ನಡ ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಯಲ್ಲಿ ತಾಂಡವಾಡುತ್ತಿದೆ ಎಂಬ ಆರೋಪಗಳು ಇತ್ತೀಚೆಗೇನೂ ಕೇಳಿಬರುತ್ತಿಲ್ಲ. ಈ ನಿಟ್ಟಿನಲ್ಲಿ ಕಸಾಪ ಅಧ್ಯಕ್ಷರ ಆಯ್ಕೆಯೂ ಚರ್ಚೆಗೆ ಗ್ರಾಸವಾಗಿದೆ.

ಮಹೇಶ್ ಜೋಶಿಯವರು, ತಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಅನುಮಾನಗಳಿಗೆ ಎಡೆಮಾಡುವ ಬೆಳವಣೆಯೊಂದು ಆಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್‌.ಆರ್‌.ರಮೇಶ್‌ ಅವರು, ಎಂ.ಮಹೇಂದ್ರಗೌಡ ಎಂಬವರನ್ನು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದುಹಾಕುವಾಗ ನೀಡಿರುವ ಕಾರಣವು ಚರ್ಚೆಗೆ ಅವಕಾಶ ನೀಡಿದೆ.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ಬನಶಂಕರಿ ಮೂರನೇ ಹಂತದ ನಿವಾಸಿಯಾಗಿರುವ ಎಂ.ಮಹೇಂದ್ರಗೌಡ ಅವರಿಗೆ ಎನ್‌.ಆರ್‌.ರಮೇಶ್‌ ಅವರು ಬರೆದಿರುವ ಪತ್ರದಲ್ಲಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ. ಅದಕ್ಕೆ ಕಾರಣವನ್ನು ಎನ್‌.ಆರ್‌.ರಮೇಶ್‌ ಹೀಗೆ ನೀಡಿದ್ದಾರೆ:

“ತಾವು ನಿರಂತರವಾಗಿ ಒಂದಿಲ್ಲೊಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಬಾರಿ ಈ ಬಗ್ಗೆ ತಮಗೆ ಎಚ್ಚರಿಕೆ ನೀಡಿದ್ದರೂ ತಾವು ಎಲ್ಲವನ್ನೂ ಕಡೆಗಣಿಸಿ, ಪ್ರಸ್ತುತ ನಡೆಯುತ್ತಿರುವ ‘ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ’ಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಾರ್ಟಿಯು ಅಧಿಕೃತವಾಗಿ ಬೆಂಬಲ ನೀಡಿರುವ ಶ್ರೀ ಮಹೇಶ್ ಜೋಶಿ ರವರ ವಿರುದ್ಧವಾಗಿ ತಾವು ಕೆಲಸ ಮಾಡುತ್ತಿರುವುದಲ್ಲದೇ, ಬೇರೊಬ್ಬ ಅಭ್ಯರ್ಥಿಯ ಪರವಾಗಿ ತಮ್ಮ ಬೆಂಬಲವನ್ನು ಘೋಷಿಸಿ ಹಲವಾರು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಸಂದೇಶಗಳನ್ನೂ ಹಾಕಿರುತ್ತೀರಿ..”

“ಇದಕ್ಕೆ ಸಂಬಂಧಿಸಿದಂತೆ ಪದ್ಮನಾಭನಗರ ಮಂಡಲ ಭಾಜಪ ಘಟಕದ ಅಧ್ಯಕ್ಷರಾಗಿರುವ ರವಿಕುಮಾರ್‌ ದೂರನ್ನೂ ಸಲ್ಲಿಸಿರುತ್ತಾರೆ. ಆದ ಕಾರಣ ಈ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ದಕ್ಷಿಣ ಜಿಲ್ಲಾ ಭಾಜಪ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಇನ್ನು ಮುಂದೆ ತಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ ಎಂಬ ಅಂಶವನ್ನೂ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ

ಎನ್‌.ಆರ್‌.ರಮೇಶ್ ಅವರ ಈ ಪತ್ರವು ವೈರಲ್‌ ಆಗಿದೆ. ಜೋಶಿಯವರು ಪಕ್ಷಾತೀತರಲ್ಲ ಎಂಬುದು ಕೇವಲ ಹೇಳಿಕೆಯಷ್ಟೇ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಎನ್‌.ಆರ್‌.ರಮೇಶ್, “ಮಹೇಂದ್ರಗೌಡ ಅವರು ನಿರಂತರವಾಗಿ ಪಕ್ಷಕ್ಕೆ ಮುಜುಗರ ಆಗುವಂತೆ ಪೋಸ್ಟರ್‌ಗಳನ್ನು ಮಾಡುತ್ತಿದ್ದರು. ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಈಗಾಗಲೇ ಮೂರು ಬಾರಿ ಕರೆದು ಶೋಕಸ್ ನೋಟಿಸ್ ನೀಡಲಾಗಿತ್ತು. ಆದರೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಅವರನ್ನು ಕಾರ್ಯಕಾರಣಿ ಸಮಿತಿಯಿಂದ ತೆಗೆಯಲಾಗಿದೆ. ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಬಹುದು. ಅದಕ್ಕೆ ಅಡ್ಡಿ ಇಲ್ಲ. ನಮ್ಮ ಜಿಲ್ಲೆಯಿಂದ ಮಹೇಶ್‌ ಜೋಶಿಯವರಿಗೆ ಬೆಂಬಲ ನೀಡಿದ್ದೇವೆ. ಕಾಂಗ್ರೆಸ್‌ನವರು, ಜೆಡಿಎಸ್‌ನವರು, ಕಮ್ಯುನಿಸ್ಟರು ಎಲ್ಲರೂ ಕಸಾಪ ರಾಜಕೀಯದಲ್ಲಿ ರಾಜಕಾರಣ ಮಾಡಿದ್ದಾರೆ. ಹೀಗಾಗಿ ನಮ್ಮ ವಿಚಾರಧಾರೆಗಳಿಗೆ ಹತ್ತಿರವಿರುವವರಿಗೆ ಬೆಂಬಲ ನೀಡಿದ್ದೇವೆ. ಮಹೇಶ್‌ ಜೋಶಿಯವರೇನೂ ನಮ್ಮ ಬಳಿ ಬಂದು ಬೆಂಬಲ ಕೇಳಿಲ್ಲ. ಇದು ನಮ್ಮ ವೈಯಕ್ತಿಕ ನಿಲುವು” ಎಂದರು. ಮಹೇಂದ್ರಗೌಡ ಅವರ ಪ್ರತಿಕ್ರಿಯೆಗೆ ಕರೆ ಮಾಡಲಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕಸಾಪದಂತಹ ಸ್ವಾಯತ್ತ ಸಂಸ್ಥೆ ದಿನೇದಿನೇ ಪಕ್ಷ ರಾಜಕಾರಣದ ಪಡಸಾಲೆಯಾಗುತ್ತಿರುವುದಕ್ಕೆ ಪ್ರಜ್ಞಾವಂತರು ವಿಷಾದ ವ್ಯಕ್ತಪಡಿಸುತ್ತಿರುವುದಂತೂ ಸತ್ಯ. ಜಾತಿ, ಮತಗಳನ್ನು ಮೀರಿ ಕನ್ನಡದ ಕೆಲಸಗಳು ಆಗಬೇಕೆಂಬುದು ಕನ್ನಡ ಮನಸ್ಸುಗಳ ಆಗ್ರಹ.


ಇದನ್ನೂ ಓದಿರಿ: ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...