Homeಮುಖಪುಟಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವೆಂದು ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಹೊಸ ಅಬಕಾರಿ ನೀತಿಯ ಅಡಿಯಲ್ಲಿ ರಾಜ್ಯದಲ್ಲಿ ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವಾಗಿ ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮಹುವಾ ಮಾರಾಟ ಅಥವಾ ಸೇವನೆಯು ಇಲ್ಲಿಯವರೆಗೆ ಕಾನೂನುಬಾಹಿರವಾಗಿತ್ತು!

“ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುತ್ತಿದೆ, ಅದರ ಅಡಿಯಲ್ಲಿ ಯಾರಾದರೂ ಸಾಂಪ್ರದಾಯಿಕ ರೀತಿಯಲ್ಲಿ ಮಹುವಾದಿಂದ ಮದ್ಯವನ್ನು ತಯಾರಿಸಿದರೆ, ಅದು ಇನ್ನು ಮುಂದೆ ಅಕ್ರಮವಾಗುವುದಿಲ್ಲ” ಎಂದು ಚೌಹಾಣ್ ಹೇಳಿದ್ದಾರೆ. ಇದನ್ನು “ಹೆರಿಟೇಜ್ ಮದ್ಯ” (ಪಾರಂಪರಿಕ ಮದ್ಯ) ಎಂಬ ಹೆಸರಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುವುದು. ಈ ನೀತಿಯಿಂದಾಗಿ ಮಹುವಾ ಮದ್ಯವನ್ನು ತಯಾರಿಸುವ ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಆದಾಯ ದೊರಕಲಿದೆ ಎಂದು ಪ್ರತಿಪಾದಿಸಲಾಗಿದೆ.

ಬಿಜೆಪಿ ಸರ್ಕಾರದ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. “ಭಾರತೀಯ ಜನತಾ ಪಾರ್ಟಿಯ ನೈತಿಕ ಅಧಃಪತನ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಪ್ರತಿಕ್ರಿಯಿಸಿ, ‘ಕಚ್ಚಿ ಶರಬ್ (ದೇಸಿ ಮದ್ಯ) ಅನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ಇದರ ನಡುವೆ, ಸಮುದಾಯ ಅರಣ್ಯದ ಹಕ್ಕನ್ನು ಆದಿವಾಸಿಗಳನ್ನು ಹೊಂದಿದ್ದಾರೆ. ಅಲ್ಲಿ ಅವರು ಮರಗಳನ್ನು ನೆಡಬಹುದು, ಮರ ಮತ್ತು ಹಣ್ಣುಗಳನ್ನು ಏನು ಮಾಡಬೇಕೆಂದು ನಿರ್ಧರಿಸಬಹುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬುಡಕಟ್ಟು ಸಮುದಾಯದ ವ್ಯಕ್ತಿಗಳ ಮೇಲಿರುವ ಸುಳ್ಳು ಹಾಗೂ ಸಣ್ಣ ಪ್ರಮಾಣದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಚೌಹಾಣ್ ಘೋಷಿಸಿದ್ದಾರೆ. ಟೆಂಡು ಎಲೆ ಮಾರಾಟ ಮಾಡುವ ಹಕ್ಕನ್ನು ಬುಡಕಟ್ಟು ಜನಾಂಗದವರಿಗೂ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಟೆಂಡು ಎಲೆಗಳನ್ನು ಬೀಡಿ ಸುತ್ತಲು ಬಳಸಲಾಗುತ್ತದೆ.

ಬುಡಕಟ್ಟು ಸಮುದಾಯಗಳಲ್ಲಿ ಕುಡಿತ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ ಎಂಬುದು ಎಲ್ಲ ಸಾಮಾಜಿಕ ಚಿಂತಕರ ಆತಂಕ. ಗೌರವಯುತ ಹಾಗೂ ಬುಡಕಟ್ಟು ಪರಂಪರೆಯನ್ನೇ ಪ್ರತಿನಿಧಿಸುವ ಪರ್ಯಾಯ ಉದ್ಯೋಗಗಳು ಸಾಕಷ್ಟಿದ್ದರೂ, ಕುಡಿತವನ್ನು ಪ್ರಚೋದಿಸುವ ಉದ್ಯೋಗದತ್ತ ಈ ಸಮುದಾಯವನ್ನು ತಳ್ಳುವುದು ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

ಸರ್ಕಾರದ ನಿರ್ಧಾರವನ್ನು ಅನೇಕರು ಟೀಕಿಸಿದ್ದಾರೆ. ‘ಪ್ರಾಚೀನ ಧೂಮಪಾನ’ ಎಂದು ಹೆಸರಿಸಿ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಿಜೆಪಿ ನಂತರ ಕಾಂಗ್ರೆಸ್ ಸರದಿ: ಇಂದು ಟಿಎಂಸಿ ಸೇರಲಿರುವ ಬಿಹಾರ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...